<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನ ಬಜೆಟ್ನಲ್ಲಿ ನೀರಾವರಿಗೆ ₹17 ಸಾವಿರ ಕೋಟಿ ಅನುದಾನ ನೀಡಲಾಗಿದೆ. ರಾಜ್ಯದಾದ್ಯಂತಕೆರೆಗಳನ್ನು ತುಂಬಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ನಲ್ಲಿ ತಿಳಿಸಿದ್ದಾರೆ.</p>.<p>ಏತ ನೀರಾವರಿ ಯೋಜನೆಗಳಿಗೆ ₹ 1563 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಕೆರೆ ತುಂಬಿಸುವುದು ಸೇರಿದಂತೆ ಕೆರೆ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು 2 ಸಾವಿರ ಕೋಟಿ ರೂಪಾಯಿ, ಕಾಲುವೆಗಳ ಅಭಿವೃದ್ಧಿ ಮತ್ತು ಬ್ಯಾರೆಜ್ ನಿರ್ಮಾಣಕ್ಕೆ ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ನದಿಗಳ ಪುನಶ್ಚೇತನ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ನೀಡಲಾಗಿದೆ.</p>.<p>ಶಿವಮೊಗ್ಗ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಕೆರೆಗಳ ಸುಧಾರಣೆಗೆ ಮುಂದಿನ 3 ವರ್ಷಗಳಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ. ಕೆ.ಸಿ.ವ್ಯಾಲಿ ಅಭಿವೃದ್ಧಿಗೆ 40 ಕೋಟಿ ರೂಪಾಯಿ ನೀಡಲಾಗಿದೆ.</p>.<p>ಅಂತರ್ಜಲ ಕುಸಿತವಾಗಿರುವ ತಾಲ್ಲೂಕುಗಳಲ್ಲಿ ಅಂತರ್ಜಲ ವೃದ್ಧಿಸಲು ಚೆಕ್ ಡ್ಯಾಂ ಮತ್ತು ಬ್ಯಾರೇಜ್ ನಿರ್ಮಾಣ ಹಾಗೂನೀರು ಮರುಪೂರಣಕ್ಕೆ ₹200 ಕೋಟಿ ತೆಗೆದಿರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನ ಬಜೆಟ್ನಲ್ಲಿ ನೀರಾವರಿಗೆ ₹17 ಸಾವಿರ ಕೋಟಿ ಅನುದಾನ ನೀಡಲಾಗಿದೆ. ರಾಜ್ಯದಾದ್ಯಂತಕೆರೆಗಳನ್ನು ತುಂಬಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ನಲ್ಲಿ ತಿಳಿಸಿದ್ದಾರೆ.</p>.<p>ಏತ ನೀರಾವರಿ ಯೋಜನೆಗಳಿಗೆ ₹ 1563 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಕೆರೆ ತುಂಬಿಸುವುದು ಸೇರಿದಂತೆ ಕೆರೆ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು 2 ಸಾವಿರ ಕೋಟಿ ರೂಪಾಯಿ, ಕಾಲುವೆಗಳ ಅಭಿವೃದ್ಧಿ ಮತ್ತು ಬ್ಯಾರೆಜ್ ನಿರ್ಮಾಣಕ್ಕೆ ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ನದಿಗಳ ಪುನಶ್ಚೇತನ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ನೀಡಲಾಗಿದೆ.</p>.<p>ಶಿವಮೊಗ್ಗ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಕೆರೆಗಳ ಸುಧಾರಣೆಗೆ ಮುಂದಿನ 3 ವರ್ಷಗಳಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ. ಕೆ.ಸಿ.ವ್ಯಾಲಿ ಅಭಿವೃದ್ಧಿಗೆ 40 ಕೋಟಿ ರೂಪಾಯಿ ನೀಡಲಾಗಿದೆ.</p>.<p>ಅಂತರ್ಜಲ ಕುಸಿತವಾಗಿರುವ ತಾಲ್ಲೂಕುಗಳಲ್ಲಿ ಅಂತರ್ಜಲ ವೃದ್ಧಿಸಲು ಚೆಕ್ ಡ್ಯಾಂ ಮತ್ತು ಬ್ಯಾರೇಜ್ ನಿರ್ಮಾಣ ಹಾಗೂನೀರು ಮರುಪೂರಣಕ್ಕೆ ₹200 ಕೋಟಿ ತೆಗೆದಿರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>