ಕೆಆರ್ಎಸ್, ಹೇಮಾವತಿ, ಕಬಿನಿ, ಹಾರಂಗಿಜಲಾಶಯಗಳಲ್ಲಿ ಇರುವ ನೀರು ಜುಲೈ ಅಂತ್ಯದವರೆಗೆ ಕುಡಿಯಲು ಸಾಕಾಗಬಹುದು. ಅಷ್ಟರಲ್ಲಿ ಮಳೆ ಬಂದರೆ ಪರಿಸ್ಥಿತಿ ಸುಧಾರಿಸಬಹುದು. ಇಲ್ಲವಾದರೆ ನೀರಿಗೆ ಏನು ಮಾಡುವುದು ಎಂಬ ಚಿಂತೆ ಸರ್ಕಾರವನ್ನು ಕಾಡುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಕಾಣಿಸಿಕೊಳ್ಳಲಿದೆ.