ಮೈಸೂರು:ಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಸಾ.ರಾ. ಮಹೇಶ್, ‘ಈ ವಿಚಾರದಲ್ಲಿ ನಮ್ಮ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿದ್ದೇವೆ’ ಎಂದು ಹೇಳಿದರು.
‘ಸಿದ್ದರಾಮಯ್ಯ ನಮ್ಮೆಲ್ಲರಿಗಿಂತ ದೊಡ್ಡವರು.ಮಾಜಿ ಮುಖ್ಯಮಂತ್ರಿ ಆಗಿದ್ದವರು, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅವರ ತೀರ್ಮಾನದಂತೆ ನಾವು ಸಚಿವರಾಗಿದ್ದೇವೆ’ ಎಂದರು.