ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ತೀರ್ಮಾನದಂತೆ ನಾವು ಸಚಿವರಾಗಿದ್ದೇವೆ: ಜೆಡಿಎಸ್ ಸಚಿವ ಸಾ.ರಾ.ಮಹೇಶ್

Last Updated 17 ನವೆಂಬರ್ 2018, 5:49 IST
ಅಕ್ಷರ ಗಾತ್ರ

ಮೈಸೂರು:ಮೇಯರ್‌ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಸಾ.ರಾ. ಮಹೇಶ್‌, ‘ಈ ವಿಚಾರದಲ್ಲಿ ನಮ್ಮ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿದ್ದೇವೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ನಮ್ಮೆಲ್ಲರಿಗಿಂತ ದೊಡ್ಡವರು.ಮಾಜಿ ಮುಖ್ಯಮಂತ್ರಿ ಆಗಿದ್ದವರು, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅವರ ತೀರ್ಮಾನದಂತೆ ನಾವು ಸಚಿವರಾಗಿದ್ದೇವೆ’ ಎಂದರು.

ಮೇಯರ್‌ ಆಯ್ಕೆ ಸಂಬಂಧ ಕಾಂಗ್ರೆಸ್‌ ನಾಯಕರು ನಮ್ಮ ವರಿಷ್ಠರಿಗೆ ಮನವಿ ಮಾಡಿದ್ದರು.ಅದರಂತೆ ನಮ್ಮ ವರಿಷ್ಠರು ಮೇಯರ್‌ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ ಎಂದು ತಿಳಿಸಿದರು.

ಪಾಲಿಕೆಯ ಮೊದಲಹಾಗೂ ಮೂರನೇ ಅವಧಿಗೆ ಕಾಂಗ್ರೆಸ್, ಎರಡನೇ, ನಾಲ್ಕನೇ ಹಾಗೂ ಐದನೇ ಅವಧಿಗೆ ಜೆಡಿಎಸ್‌ ಪಕ್ಷದವರು ಮೇಯರ್ ಆಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT