ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸರ್ಕಾರ ರಚನೆಗೆ ಸಿದ್ಧ: ಡಿ.ವಿ.ಸದಾನಂದ ಗೌಡ

ಕಾಂಗ್ರೆಸ್, ಜೆಡಿಎಸ್ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ
Last Updated 15 ಜನವರಿ 2019, 19:55 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ. ಅವರ ಒಳಜಗಳದಿಂದ ಸರ್ಕಾರ ಪತನವಾದರೆ ನಾವು ಹೊಸ ಸರ್ಕಾರ ರಚನೆಗೆ ಸಿದ್ಧರಿದ್ದೇವೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಈ ಕಾರಣಕ್ಕೆ ನಮ್ಮ ಶಾಸಕರು ರೆಸಾರ್ಟ್‌ನಲ್ಲಿ ಉಳಿದಿದ್ದಾರೆ. ಅಗತ್ಯ ಬಂದಾಗ ನಾವು ಅವರನ್ನು ಕರೆಸಿಕೊಳ್ಳುತ್ತೇವೆ’ ಎಂದರು

‘ನಾವು ಆಪರೇಷನ್ ಕಮಲ ಮಾಡುತ್ತಿಲ್ಲ. ಇಷ್ಟಕ್ಕೂ ನಮಗೇನೂ ಕಾಯಿಲೆಯಿಲ್ಲ. ಆದರೆ, ಆಪರೇಷನ್ ಬೇಕಾಗಿರುವುದು ಮೈತ್ರಿ ಸರ್ಕಾರಕ್ಕೆ. ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಗೊಂದಲದ ಗೂಡಾಗಿ, ಅನಾರೋಗ್ಯದಿಂದ ಬಳಲುತ್ತಿದೆ. ಹೀಗಾಗಿ ಆಪರೇಷನ್ ಬೇಕಾಗಿದೆ’ ಎಂದು ಸದಾನಂದಗೌಡ ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT