ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂರೂ ಬಿಟ್ಟಿರುವ ಮಂದಿಗೆ (ಮುಖ್ಯಮಂತ್ರಿ ಕುಮಾರಸ್ವಾಮಿಗೆ) ರಾಜೀನಾಮೆ ಕೊಡುವಂತೆ ಒತ್ತಾಯಿಸುವುದಿಲ್ಲ. ಆದರೆ, ಎರಡೂ ಪಕ್ಷಗಳ ಶಾಸಕರು, ಪಕ್ಷೇತರರು ಅವರಿಂದ ದೂರವಾಗಿದ್ದಾರೆ. ಅವರು ಬೆಂಬಲ ಕೊಟ್ಟರೆ ಸರ್ಕಾರ ರಚಿಸುತ್ತೇವೆ’ ಎಂದು ಭರವಸೆ ವ್ಯಕ್ತಪಡಿಸಿದರು.