ಶ್ರೀರಾಮ ಸೇನೆ ನಗರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಗೋಹತ್ಯೆ ನಿಷೇಧ ಮಾಡಿದ್ದೆವು. ಆದರೆ, ಬಳಿಕ ಕಾಂಗ್ರೆಸ್ ಸರ್ಕಾರ ಅದನ್ನು ರದ್ದುಗೊಳಿಸಿತ್ತು. ಇದೀಗ ನಮಗೆ ಅವಕಾಶ ಸಿಕ್ಕಿದ್ದು, ಗೋವಿನ ಸಂತತಿ ಉಳಿವಿಗೆ ನಿಷೇಧವನ್ನು ಪುನಃ ಜಾರಿ ಮಾಡುತ್ತೇವೆ’ ಎಂದು ಹೇಳಿದರು.