‘ಎಲ್ಲ ಜಿಲ್ಲೆಗಳಲ್ಲೂ ಕೈಗಾರಿಕಾ ಅದಾಲತ್ ಮತ್ತು ಸಮಾಲೋಚನಾ ಸಭೆಗಳನ್ನು ನಡೆಸಿ, ಉದ್ಯಮಿಗಳ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸುತ್ತೇನೆ. ಕೈಗಾರಿಕೆಗಳು ಬೆಂಗಳೂರು ಕೇಂದ್ರಿತವಾಗದಂತೆ ನೋಡಿಕೊಳ್ಳಲಾಗುವುದು. ಉತ್ತರ ಕರ್ನಾಟಕ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಹೂಡಿಕೆದಾರರನ್ನು ಆಕರ್ಷಿಸಲಾಗುವುದು. ಮುಂಬೈ–ಚೆನ್ನೈ ಕೈಗಾರಿಕಾ ಕಾರಿಡಾರ್ಗೆ ಕೇಂದ್ರವೂ ಪ್ರೋತ್ಸಾಹ ಕೊಡುತ್ತಿದೆ. ಇದನ್ನು ಬಳಸಿಕೊಂದು ಬೆಳಗಾವಿ, ಹುಬ್ಬಳ್ಳಿ–ಧಾರವಾಡಯಂತಹ 2ನೇ ಹಂತದ ನಗರಗಳಿಗೆ ಹೆಚ್ಚಿನ ಉದ್ಯಮಗಳು ಬರುವಂತೆ ಮಾಡಲಾಗುವುದು. ಭೂ ಬ್ಯಾಂಕ್ ಸ್ಥಾಪಿಸಲಾಗುವುದು’ ಎಂದರು.