<p><strong>ಬೆಂಗಳೂರು:</strong> ‘ಪಾಕಿಸ್ತಾನ ನಮ್ಮ ವೈರಿ ರಾಷ್ಟ್ರ. ಈ ದೇಶವನ್ನು ಭೂಪಟದಿಂದಲೇ ತೆಗೆದುಹಾಕುತ್ತೇವೆ’ ಎಂದು ಕಂದಾಯ ಸಚಿವ ಆರ್.ಅಶೋಕ ಗುರುವಾರ ಹೇಳಿದರು.</p>.<p>ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಅಂಗವಾಗಿ ಗುರುವಾರ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಭಯೋತ್ಪಾದನೆ ಸೃಷ್ಟಿಸುತ್ತಿರುವ ಪಾಕಿಸ್ತಾನ ಭೂಪಟದಲ್ಲೇ ಇರಬಾರದು’ ಎಂದರು.</p>.<p>‘ಪಾಕಿಸ್ತಾನದ ಹೆಸರು ಹೇಳದಿದ್ದರೆ ಬಿಜೆಪಿಯವರಿಗೆ ಒಂದು ವೋಟು ಬರುವುದಿಲ್ಲ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಭಾರತೀಯರಾದ ನಾವು ನಮ್ಮ ಧ್ವಜಕ್ಕೆ ಗೌರವ ಕೊಡುತ್ತೇವೆ. ಅವರಿಗೆ ಆ ದೇಶದ ಮೇಲೆ ಪ್ರೀತಿ ಹೆಚ್ಚಾಗಿದ್ದು, ಮುಸ್ಲಿಮರನ್ನೇ ಓಲೈಸಲಿ’ ಎಂದು ತಿರುಗೇಟು ನೀಡಿದರು.</p>.<p><strong>‘ಪಾಕ್–ಬಾಂಗ್ಲಾ ಸೇರಿ ಅಖಂಡ ಭಾರತ’<br />ಚಿತ್ರದುರ್ಗ:</strong> ‘ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಸೇರಿಸಿ ಅಖಂಡ ಭಾರತ ನಿರ್ಮಾಣ ಮಾಡುವುದು ಬಿಜೆಪಿ ಸಂಕಲ್ಪ. ಈ ಎರಡೂ ರಾಷ್ಟ್ರಗಳಲ್ಲಿ ಹಿಂದುತ್ವವನ್ನು ಸಾರಿ ಹೇಳುತ್ತೇವೆ’ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಖಂಡ ಭಾರತ ನಿರ್ಮಾಣ ದೇಶ ಭಕ್ತರ ಕನಸು. ಭಯೋತ್ಪಾದನೆ ನಿಗ್ರಹ ಮಾಡಲು ಇದು ಅತ್ಯಗತ್ಯ. ಉಗ್ರ ಚಟುವಟಿಕೆಯಲ್ಲಿ ತೊಡಗಿದವರನ್ನು ಒದ್ದು ಹೊರಗೆ ಹಾಕುತ್ತೇವೆ’ ಎಂದು ಚಿಟಕಿ ಹೊಡೆದರು.</p>.<p>‘ಫ್ರೀ ಕಾಶ್ಮಿರಕ್ಕೆ ಕುಮ್ಮಕ್ಕು ನೀಡಿ ಮತ್ತೊಂದು ಪಾಕಿಸ್ತಾನ ಸೃಷ್ಟಿಸುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ಇದಕ್ಕೆ ಕುಮ್ಮಕ್ಕು ನೀಡುತ್ತಿವೆ. ಈ ದೇಶದ ಒಂದಿಂಚು ನೆಲವನ್ನೂ ಬೇರೆಯವರಿಗೆ ಬಿಟ್ಟು ಕೊಡುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಾಕಿಸ್ತಾನ ನಮ್ಮ ವೈರಿ ರಾಷ್ಟ್ರ. ಈ ದೇಶವನ್ನು ಭೂಪಟದಿಂದಲೇ ತೆಗೆದುಹಾಕುತ್ತೇವೆ’ ಎಂದು ಕಂದಾಯ ಸಚಿವ ಆರ್.ಅಶೋಕ ಗುರುವಾರ ಹೇಳಿದರು.</p>.<p>ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಅಂಗವಾಗಿ ಗುರುವಾರ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಭಯೋತ್ಪಾದನೆ ಸೃಷ್ಟಿಸುತ್ತಿರುವ ಪಾಕಿಸ್ತಾನ ಭೂಪಟದಲ್ಲೇ ಇರಬಾರದು’ ಎಂದರು.</p>.<p>‘ಪಾಕಿಸ್ತಾನದ ಹೆಸರು ಹೇಳದಿದ್ದರೆ ಬಿಜೆಪಿಯವರಿಗೆ ಒಂದು ವೋಟು ಬರುವುದಿಲ್ಲ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಭಾರತೀಯರಾದ ನಾವು ನಮ್ಮ ಧ್ವಜಕ್ಕೆ ಗೌರವ ಕೊಡುತ್ತೇವೆ. ಅವರಿಗೆ ಆ ದೇಶದ ಮೇಲೆ ಪ್ರೀತಿ ಹೆಚ್ಚಾಗಿದ್ದು, ಮುಸ್ಲಿಮರನ್ನೇ ಓಲೈಸಲಿ’ ಎಂದು ತಿರುಗೇಟು ನೀಡಿದರು.</p>.<p><strong>‘ಪಾಕ್–ಬಾಂಗ್ಲಾ ಸೇರಿ ಅಖಂಡ ಭಾರತ’<br />ಚಿತ್ರದುರ್ಗ:</strong> ‘ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಸೇರಿಸಿ ಅಖಂಡ ಭಾರತ ನಿರ್ಮಾಣ ಮಾಡುವುದು ಬಿಜೆಪಿ ಸಂಕಲ್ಪ. ಈ ಎರಡೂ ರಾಷ್ಟ್ರಗಳಲ್ಲಿ ಹಿಂದುತ್ವವನ್ನು ಸಾರಿ ಹೇಳುತ್ತೇವೆ’ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.</p>.<p>ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಖಂಡ ಭಾರತ ನಿರ್ಮಾಣ ದೇಶ ಭಕ್ತರ ಕನಸು. ಭಯೋತ್ಪಾದನೆ ನಿಗ್ರಹ ಮಾಡಲು ಇದು ಅತ್ಯಗತ್ಯ. ಉಗ್ರ ಚಟುವಟಿಕೆಯಲ್ಲಿ ತೊಡಗಿದವರನ್ನು ಒದ್ದು ಹೊರಗೆ ಹಾಕುತ್ತೇವೆ’ ಎಂದು ಚಿಟಕಿ ಹೊಡೆದರು.</p>.<p>‘ಫ್ರೀ ಕಾಶ್ಮಿರಕ್ಕೆ ಕುಮ್ಮಕ್ಕು ನೀಡಿ ಮತ್ತೊಂದು ಪಾಕಿಸ್ತಾನ ಸೃಷ್ಟಿಸುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ಇದಕ್ಕೆ ಕುಮ್ಮಕ್ಕು ನೀಡುತ್ತಿವೆ. ಈ ದೇಶದ ಒಂದಿಂಚು ನೆಲವನ್ನೂ ಬೇರೆಯವರಿಗೆ ಬಿಟ್ಟು ಕೊಡುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>