<p><strong>ದಾವಣಗೆರೆ:</strong> ಪಾರಂಪರಿಕ ವೈದ್ಯ ಪದ್ಧತಿಗೆ ಅಗತ್ಯವಿರುವ ಹಲವು ಬಗೆಯ ಔಷಧ ಸಸ್ಯಗಳಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಬೇಕು ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.</p>.<p>ನಗರದಲ್ಲಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನ ಹಾಗೂ ಮೂಲಿಕಾ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>ಪಶ್ಚಿಮಘಟ್ಟ, ಹಿಮಾಲಯ ಪರ್ವತ ಹಾಗೂ ಹಲವು ಪರ್ವತ ಶ್ರೇಣಿಗಳಲ್ಲಿ ಔಷಧ ಸಸ್ಯಗಳಿವೆ. ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಮಾಡಲಾಗುತ್ತಿದೆ. ಇದರಿಂದ ಹವಾಮಾನ ಬದಲಾವಣೆಯೂ ಆಗುತ್ತಿದೆ. ಈ ಹಿನ್ನೆಲೆಯಲ್ಲಿಯೇ ವಿಜ್ಞಾನಿಗಳಾದ ಮಾಧವ್ ಗಾಡ್ಗೀಳ್, ಕಸ್ತೂರಿರಂಗನ್ ಅವರು ಪಶ್ಚಿಮಘಟ್ಟ ಸಂರಕ್ಷಣೆಗಾಗಿ ವರದಿ ನೀಡಿದ್ದಾರೆ. ಪ್ರಕೃತಿ ವಿಕೋಪ ತಡೆಯುವುದರ ಜೊತೆಗೆ ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಔಷಧ ಸಸ್ಯಸಂಕುಲಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಪ್ರತಿಪಾದಿಸಿದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ‘ಈ ಹಿಂದೆ ಉತ್ರಾಣಿ ಬೇರನ್ನು ಮೂರು ದಿನ ಹೊಟ್ಟೆಗೆ ಕಟ್ಟಿಕೊಂಡಿದ್ದರೆ ಸಹಜವಾಗಿ ಹೆರಿಗೆ ಆಗುತ್ತಿತ್ತು. ಆದರೆ, ಇಂದು ಸಹಜ ಹೆರಿಗೆ ಆಗುವುದಿಲ್ಲ ಎಂಬ ಭಯದ ವಾತಾವರಣವನ್ನು ವೈದ್ಯರು ಸೃಷ್ಟಿಸುತ್ತಿದ್ದಾರೆ. ’ ಎಂದು ಕಳವಳ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪಾರಂಪರಿಕ ವೈದ್ಯ ಪದ್ಧತಿಗೆ ಅಗತ್ಯವಿರುವ ಹಲವು ಬಗೆಯ ಔಷಧ ಸಸ್ಯಗಳಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಬೇಕು ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.</p>.<p>ನಗರದಲ್ಲಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನ ಹಾಗೂ ಮೂಲಿಕಾ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>ಪಶ್ಚಿಮಘಟ್ಟ, ಹಿಮಾಲಯ ಪರ್ವತ ಹಾಗೂ ಹಲವು ಪರ್ವತ ಶ್ರೇಣಿಗಳಲ್ಲಿ ಔಷಧ ಸಸ್ಯಗಳಿವೆ. ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಮಾಡಲಾಗುತ್ತಿದೆ. ಇದರಿಂದ ಹವಾಮಾನ ಬದಲಾವಣೆಯೂ ಆಗುತ್ತಿದೆ. ಈ ಹಿನ್ನೆಲೆಯಲ್ಲಿಯೇ ವಿಜ್ಞಾನಿಗಳಾದ ಮಾಧವ್ ಗಾಡ್ಗೀಳ್, ಕಸ್ತೂರಿರಂಗನ್ ಅವರು ಪಶ್ಚಿಮಘಟ್ಟ ಸಂರಕ್ಷಣೆಗಾಗಿ ವರದಿ ನೀಡಿದ್ದಾರೆ. ಪ್ರಕೃತಿ ವಿಕೋಪ ತಡೆಯುವುದರ ಜೊತೆಗೆ ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಔಷಧ ಸಸ್ಯಸಂಕುಲಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಪ್ರತಿಪಾದಿಸಿದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ‘ಈ ಹಿಂದೆ ಉತ್ರಾಣಿ ಬೇರನ್ನು ಮೂರು ದಿನ ಹೊಟ್ಟೆಗೆ ಕಟ್ಟಿಕೊಂಡಿದ್ದರೆ ಸಹಜವಾಗಿ ಹೆರಿಗೆ ಆಗುತ್ತಿತ್ತು. ಆದರೆ, ಇಂದು ಸಹಜ ಹೆರಿಗೆ ಆಗುವುದಿಲ್ಲ ಎಂಬ ಭಯದ ವಾತಾವರಣವನ್ನು ವೈದ್ಯರು ಸೃಷ್ಟಿಸುತ್ತಿದ್ದಾರೆ. ’ ಎಂದು ಕಳವಳ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>