ಪಶ್ಚಿಮಘಟ್ಟ, ಹಿಮಾಲಯ ಪರ್ವತ ಹಾಗೂ ಹಲವು ಪರ್ವತ ಶ್ರೇಣಿಗಳಲ್ಲಿ ಔಷಧ ಸಸ್ಯಗಳಿವೆ. ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಮಾಡಲಾಗುತ್ತಿದೆ. ಇದರಿಂದ ಹವಾಮಾನ ಬದಲಾವಣೆಯೂ ಆಗುತ್ತಿದೆ. ಈ ಹಿನ್ನೆಲೆಯಲ್ಲಿಯೇ ವಿಜ್ಞಾನಿಗಳಾದ ಮಾಧವ್ ಗಾಡ್ಗೀಳ್, ಕಸ್ತೂರಿರಂಗನ್ ಅವರು ಪಶ್ಚಿಮಘಟ್ಟ ಸಂರಕ್ಷಣೆಗಾಗಿ ವರದಿ ನೀಡಿದ್ದಾರೆ. ಪ್ರಕೃತಿ ವಿಕೋಪ ತಡೆಯುವುದರ ಜೊತೆಗೆ ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಔಷಧ ಸಸ್ಯಸಂಕುಲಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಪ್ರತಿಪಾದಿಸಿದರು.