ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹5 ಸಾವಿರ ನೆರವಿಗೆ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ  

Last Updated 23 ಮೇ 2020, 6:18 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ₹5 ಸಾವಿರ ನೆರವು ನೀಡುವುದಾಗಿ ಘೋಷಿಸಿದ್ದು, ಈ ಸಂಬಂಧ ಅರ್ಜಿಯನ್ನು 'ಸೇವಾ ಸಿಂಧು' ಪೋರ್ಟಲ್ ನಲ್ಲಿ ಶನಿವಾರ ಅಪ್ ಲೋಡ್ ಮಾಡಿದೆ.

ಚಾಲಕರು ತಮ್ಮ ಆಧಾರ್ ಸಂಖ್ಯೆ, ವಿಳಾಸ, ಡಿಎಲ್‌ ಸಂಖ್ಯೆ, ಬ್ಯಾಡ್ಜ್ ಸಂಖ್ಯೆ, ವಾಹನದ ಫಿಟ್ ನೆಸ್ ಸರ್ಟಿಫಿಕೇಟ್, ಚಾಲಕರ ವರ್ಗ, ವಾಹನದ ವರ್ಗ, ಬ್ಯಾಂಕ್ ಖಾತೆ ಸಂಖ್ಯೆ ಮತ್ತಿತರ ವಿವರವನ್ನು ಇಂಗ್ಲಿಷ್ ನಲ್ಲಿಯೇ ಭರ್ತಿ ಮಾಡಬೇಕು. ಚಾಲನಾ ಪರವಾನಗಿಯಲ್ಲಿರುವಂತೆಯೇ ಚಾಲಕರು ತಮ್ಮ ಹೆಸರನ್ನು ಅರ್ಜಿಯಲ್ಲಿ ನಮೂದಿಸಬೇಕು.

ಎಲ್ಲ ವಿವರ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಅರ್ಹರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ಹೇಳಿದೆ.

ಹೆಚ್ಚಿನ ಮಾಹಿತಿಗೆ 080-22236698/ 9449863214 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಅರ್ಜಿಗಾಗಿ https://serviceonline.gov.in/karnataka/directApply.do?serviceId=1088 ಈ ಲಿಂಕ್ ಬಳಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT