<p><strong>ಬೆಂಗಳೂರು</strong>: ‘ಹಿಂದಿನ ವರ್ಷಗಳಲ್ಲಿ 19 ಚರ್ಚ್ಗಳ ಮೇಲೆ ದಾಳಿ ನಡೆಯಿತು. ಮಕ್ಕಳನ್ನು ಹತ್ಯೆ ಮಾಡಿ, ಬೈಬಲ್ ಸುಟ್ಟರು. ಕ್ರೈಸ್ತ ಸನ್ಯಾಸಿನಿಯರ ಮೇಲೆ ಅತ್ಯಾಚಾರ ನಡೆಯಿತು. ಈಗ ಬೊಬ್ಬೆ ಹಾಕುತ್ತಿರುವವರು ಆಗ ಏನು ಮಾಡುತ್ತಿದ್ದರು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಶ್ನಿಸಿದರು.</p>.<p>ಜೆಡಿಎಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆದಾಗ ಒಡಿಸ್ಸಾ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ನಾನೊಬ್ಬನೇ ಎಲ್ಲೆಡೆ ಹೋರಾಟ ಮಾಡಬೇಕಿತ್ತು’ ಎಂದರು.</p>.<p>‘ಇದು ಜಾತ್ಯತೀತ ರಾಷ್ಟ್ರ. ಪೌರತ್ವ (ತಿದ್ದುಪಡಿ) ಕಾಯ್ದೆ ವ್ಯಾಪ್ತಿಗೆ ಎಲ್ಲಾ ಸಮುದಾಯವನ್ನೂ ಸೇರಿಸಿದ್ದು, ಮುಸ್ಲಿಮರನ್ನು ಕೈಬಿಡಲಾಗಿದೆ. ಸಂವಿಧಾನ ಎಲ್ಲಾ ಧರ್ಮಗಳಿಗೆ ರಕ್ಷಣೆ ನೀಡಬೇಕು. ಇದನ್ನೆಲ್ಲ ರಾಜಕಾರಣಕ್ಕಲ್ಲದೆ, ಇನ್ನೇತಕ್ಕೆ ಮಾಡಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಶಾಸಕ ಡಿ.ಕೆ.ಶಿವಕುಮಾರ್ ಯೇಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವ ವಿಚಾರದಲ್ಲಿ ತಪ್ಪು ಕಂಡುಹಿಡಿಯಲು ಹೋಗಲ್ಲ. ಆದರೆ ಮಂಗಳೂರು, ಬೆಂಗಳೂರಿನಿಂದ ಏಕೆ ಕನಕಪುರಕ್ಕೆ ಹೋಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಿಂದಿನ ವರ್ಷಗಳಲ್ಲಿ 19 ಚರ್ಚ್ಗಳ ಮೇಲೆ ದಾಳಿ ನಡೆಯಿತು. ಮಕ್ಕಳನ್ನು ಹತ್ಯೆ ಮಾಡಿ, ಬೈಬಲ್ ಸುಟ್ಟರು. ಕ್ರೈಸ್ತ ಸನ್ಯಾಸಿನಿಯರ ಮೇಲೆ ಅತ್ಯಾಚಾರ ನಡೆಯಿತು. ಈಗ ಬೊಬ್ಬೆ ಹಾಕುತ್ತಿರುವವರು ಆಗ ಏನು ಮಾಡುತ್ತಿದ್ದರು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಶ್ನಿಸಿದರು.</p>.<p>ಜೆಡಿಎಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ‘ಕ್ರಿಶ್ಚಿಯನ್ನರ ಮೇಲೆ ದಾಳಿ ನಡೆದಾಗ ಒಡಿಸ್ಸಾ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ನಾನೊಬ್ಬನೇ ಎಲ್ಲೆಡೆ ಹೋರಾಟ ಮಾಡಬೇಕಿತ್ತು’ ಎಂದರು.</p>.<p>‘ಇದು ಜಾತ್ಯತೀತ ರಾಷ್ಟ್ರ. ಪೌರತ್ವ (ತಿದ್ದುಪಡಿ) ಕಾಯ್ದೆ ವ್ಯಾಪ್ತಿಗೆ ಎಲ್ಲಾ ಸಮುದಾಯವನ್ನೂ ಸೇರಿಸಿದ್ದು, ಮುಸ್ಲಿಮರನ್ನು ಕೈಬಿಡಲಾಗಿದೆ. ಸಂವಿಧಾನ ಎಲ್ಲಾ ಧರ್ಮಗಳಿಗೆ ರಕ್ಷಣೆ ನೀಡಬೇಕು. ಇದನ್ನೆಲ್ಲ ರಾಜಕಾರಣಕ್ಕಲ್ಲದೆ, ಇನ್ನೇತಕ್ಕೆ ಮಾಡಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಶಾಸಕ ಡಿ.ಕೆ.ಶಿವಕುಮಾರ್ ಯೇಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವ ವಿಚಾರದಲ್ಲಿ ತಪ್ಪು ಕಂಡುಹಿಡಿಯಲು ಹೋಗಲ್ಲ. ಆದರೆ ಮಂಗಳೂರು, ಬೆಂಗಳೂರಿನಿಂದ ಏಕೆ ಕನಕಪುರಕ್ಕೆ ಹೋಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>