ಅಷ್ಟೇ ಅಲ್ಲ, ಸ್ಥಳೀಯರ ಜತೆಗೆ ಅವರು ಉತ್ತಮ ಒಡನಾಟ ಹೊಂದಿದ್ದರು. ‘ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಸರ್ವೋದಯ ಗ್ರಾಮದ ವಾಸುದೇವಾಚಾರ್ಯರು, ಸಂಡೂರಿನ ಹಿಂದಿ ಪಂಡಿತರಾಗಿದ್ದ ಬಳ್ಳೂರು ಸುಬ್ರಾಯ ಅಡಿಗರು, ನಗರದ ಕನ್ನಡ ಪಂಡಿತ ಕೆ. ನಾರಾಯಣ ಭಟ್ಟರು ವಿಶ್ವೇಶ ತೀರ್ಥರ ಬಾಲ್ಯದ ಸ್ನೇಹಿತರಾಗಿದ್ದರು. ಅವರೆಲ್ಲರೂ ಅವರ ಸಮಕಾಲೀನ ಸಹಪಾಠಿಗಳಾಗಿದ್ದರು’ ಎಂದು ನೆನಕೆ ಮಾಡಿಕೊಂಡರು ಹಿರಿಯ ಸಾಹಿತಿ ಮೃತ್ಯುಂಜಯ ರುಮಾಲೆ.