<p><strong>ಬೆಂಗಳೂರು: ‘</strong>ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಎಲ್ಲಿದ್ದಾರೆ. ಆರೋಪಿಯೇ ದೇಶದಲ್ಲಿ ಇಲ್ಲ ಎನ್ನುತ್ತಿರುವಾಗ ಸಾಕ್ಷಿದಾರರಿಗೆ ವಾರಂಟ್ ಹೊರಡಿಸಿ ಏನು ಸಾಧಿಸುತ್ತೀರಿ’ ಎಂದು ಹೈಕೋರ್ಟ್, ರಾಜ್ಯ ಪ್ರಾಸಿಕ್ಯೂಷನ್ ಅನ್ನು ಮೌಖಿಕವಾಗಿ ಪ್ರಶ್ನಿಸಿದೆ.</p>.<p>‘ನಿತ್ಯಾನಂದ ವಿರುದ್ಧ ರಾಮನಗರದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು’ ಎಂದು ಕೋರಿ ದೂರುದಾರ ಕೆ.ಲೆನಿನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಲೆನಿನ್ ಪರ ವಕೀಲರು, ‘ಪ್ರಕರಣದಲ್ಲಿ ಲೆನಿನ್ ಸಾಕ್ಷಿದಾರರು. ಆದರೆ, ಅವರಿಗೆ ವಾರಂಟ್ ಹೊರಡಿಸಲಾಗಿದೆ. ಅಧೀನ ನ್ಯಾಯಾಲಯದಲ್ಲಿ ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಯುತ್ತಿಲ್ಲ. ಆರೋಪಿ ದೇಶ ಬಿಟ್ಟು ಹೋಗಿದ್ದಾರೆ’ ಎಂದು ದೂರಿದರು.</p>.<p>ಇದಕ್ಕೆ ಪ್ರತಿಯಾಗಿ ರಾಜ್ಯ ಪ್ರಾಸಿಕ್ಯೂಷನ್ ಪರ ವಕೀಲ ವಿ.ಎಸ್.ಹೆಗಡೆ, ‘ಈ ಪ್ರಕರಣದಲ್ಲಿ ನ್ಯಾಯಾಧೀಶರು ಹಾಗೂ ಪ್ರಾಸಿಕ್ಯೂಟರ್ ವಿರುದ್ಧವೇ ಆರೋಪ ಮಾಡಲಾಗಿದೆ. ಈ ಕುರಿತ ಪ್ರತಿಯೊಂದು ದಾಖಲೆಗಳನ್ನೂ ಹಾಜರುಪಡಿಸಲು ಸಿದ್ಧರಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಎಲ್ಲಿದ್ದಾರೆ. ಆರೋಪಿಯೇ ದೇಶದಲ್ಲಿ ಇಲ್ಲ ಎನ್ನುತ್ತಿರುವಾಗ ಸಾಕ್ಷಿದಾರರಿಗೆ ವಾರಂಟ್ ಹೊರಡಿಸಿ ಏನು ಸಾಧಿಸುತ್ತೀರಿ’ ಎಂದು ಹೈಕೋರ್ಟ್, ರಾಜ್ಯ ಪ್ರಾಸಿಕ್ಯೂಷನ್ ಅನ್ನು ಮೌಖಿಕವಾಗಿ ಪ್ರಶ್ನಿಸಿದೆ.</p>.<p>‘ನಿತ್ಯಾನಂದ ವಿರುದ್ಧ ರಾಮನಗರದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು’ ಎಂದು ಕೋರಿ ದೂರುದಾರ ಕೆ.ಲೆನಿನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಲೆನಿನ್ ಪರ ವಕೀಲರು, ‘ಪ್ರಕರಣದಲ್ಲಿ ಲೆನಿನ್ ಸಾಕ್ಷಿದಾರರು. ಆದರೆ, ಅವರಿಗೆ ವಾರಂಟ್ ಹೊರಡಿಸಲಾಗಿದೆ. ಅಧೀನ ನ್ಯಾಯಾಲಯದಲ್ಲಿ ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಯುತ್ತಿಲ್ಲ. ಆರೋಪಿ ದೇಶ ಬಿಟ್ಟು ಹೋಗಿದ್ದಾರೆ’ ಎಂದು ದೂರಿದರು.</p>.<p>ಇದಕ್ಕೆ ಪ್ರತಿಯಾಗಿ ರಾಜ್ಯ ಪ್ರಾಸಿಕ್ಯೂಷನ್ ಪರ ವಕೀಲ ವಿ.ಎಸ್.ಹೆಗಡೆ, ‘ಈ ಪ್ರಕರಣದಲ್ಲಿ ನ್ಯಾಯಾಧೀಶರು ಹಾಗೂ ಪ್ರಾಸಿಕ್ಯೂಟರ್ ವಿರುದ್ಧವೇ ಆರೋಪ ಮಾಡಲಾಗಿದೆ. ಈ ಕುರಿತ ಪ್ರತಿಯೊಂದು ದಾಖಲೆಗಳನ್ನೂ ಹಾಜರುಪಡಿಸಲು ಸಿದ್ಧರಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>