ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ನಾಯಕರ ವಿಪ್‌ ನೀಡುವ ಜವಾಬ್ದಾರಿ ಮೊಟಕು ಮಾಡುವುದಿಲ್ಲ: ಸ್ಪೀಕರ್‌ ರೂಲಿಂಗ್

Last Updated 22 ಜುಲೈ 2019, 7:02 IST
ಅಕ್ಷರ ಗಾತ್ರ

ಬೆಂಗಳೂರು: ‘ಪಕ್ಷದ ನಾಯಕರ ವಿಪ್‌ ನೀಡುವ ಜವಾಬ್ದಾರಿ ಮೊಟಕು ಮಾಡುವುದಿಲ್ಲ’ ಎಂದು ಸ್ಪೀಕರ್ ರಮೇಶ್‌ ಕುಮಾರ್ ಸ್ಪಷ್ಟವಾಗಿ ರೂಲಿಂಗ್ ನೀಡಿದರು.

'10ನೇ ಶೆಡ್ಯೂಲ್‌ನಲ್ಲಿಶಾಸಕಾಂಗ ಪಕ್ಷದ ನಾಯಕರಿಗೆ ನೀಡಿರುವ ಜವಾಬ್ದಾರಿಯನ್ನು ಮೊಟಕು ಮಾಡುವ ಕೆಲಸ ನಾವು ಮಾಡುವುದಿಲ್ಲ’ಎಂದು ವಿಪ್‌ ವಿಷಯವಾಗಿ ಸಿದ್ದರಾಮಯ್ಯ ಅವರು ಎತ್ತಿದ್ದಕ್ರಿಯಾಲೋಪಕುರಿತುಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಅವರು ರೂಲಿಂಗ್‌ನೀಡಿದರು.

‘ಸ್ಪೀಕರ್‌ ಅವರ ಅಧಿಕಾರ ವ್ಯಾಪ್ತಿಯಲ್ಲಿ ಪ್ರವೇಶಿಸುವುದಿಲ್ಲ’ ಎಂದುಸುಪ್ರೀಂ ಕೋರ್ಟ್‌ ಯಾವುದೇ ಗೊಂದಲ ಇಲ್ಲದೆ ಹೇಳಿದೆ. ಸಭಾಧ್ಯಕ್ಷರ ಸ್ವಾತಂತ್ರ್ಯಕ್ಕೆ ಯಾವುದೇ ತೊಂದರೆ ಹಾಗೂ ಉಲ್ಲಂಘನೆಯಾಗಿಲ್ಲ ಎಂದು ಸ್ಪೀಕರ್‌ ಸ್ಪಷ್ಟಪಡಿಸಿದರು.

ಇಂದು ವಿಶ್ವಾಸಮತ ಚರ್ಚೆಪೂರ್ಣಗೊಳಿಸಿ ಮತಕ್ಕೆ ಹಾಕಬೇಕು ಎಂದುಬಿಜೆಪಿಶಾಸಕ ಮಾಧುಸ್ವಾಮಿ ಸ್ಪೀಕರ್‌ಗೆ ಮನವಿ ಮಾಡಿದರು.

ಶಾಸಕರು ಸದನದಿಂದ ಹೊರಗೆ ಇದ್ದು ವಿಪ್‌ ಉಲ್ಲಂಘನೆ ಆಗುವುದಿಲ್ಲ ಎಂದು ಭಾವಿಸಿದ್ದಾರೆ. ಅವರಿಗೆ ಸದನದ ಮೂಲಕ ಸ್ಪಷ್ಟ ಸಂದೇಶ ನೀಡಬೇಕು ಎಂದು ಶಾಸಕ ಶಿವಲಿಂಗೇಗೌಡ ಸ್ಪೀಕರ್‌ಗೆ ಮನವಿ ಮಾಡಿದರು.

‘ವಿಪ್ ಉಲ್ಲಂಘಿಸಿದ ಮೇಲೆ ಶಾಸಕರು ನನ್ನ ಮುಂದೆ ಬಂದಾಗ ನಾನು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇನೆ.
ಸದ್ಯಕ್ಕೆ ನಾನು ಉತ್ತರ ನೀಡುವ ಅಗತ್ಯವಿಲ್ಲ.ಎಲ್ಲೋ ಕೂತಿರುವವರಿಗೆ ಸದನದ ಮೂಲಕ ಸಂದೇಶ ನೀಡುವುದಿಲ್ಲ. ವಿಪ್‌, ನೋಟಿಸ್‌ ನೀಡುವುದು ನಿಮಗೆ ಬಿಟ್ಟಿದ್ದು. ನನ್ನ ಬಳಿ ದೂರು ಬಂದರೆ ಕಾನುನಾತ್ಮಕವಾಗಿ ನಾನು ಕ್ರಮ ಕೈಗೊಳ್ಳುವೆ’ ಎಂದು ಸ್ಪಷ್ಟಪಡಿಸಿದರು.

ಚರ್ಚೆ ಬೆಳಿಗ್ಗೆ 12.01ಕ್ಕೆ ಆರಂಭವಾಯಿತು.11 ಗಂಟೆಗೆ ಕಲಾಪ ಆರಂಭವಾಗಬೇಕಿತ್ತು.ರಾಜಭವನದ ವಿಶೇಷಾಧಿಕಾರಿ ರಮೇಶ್‌ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದು, ರಾಜ್ಯಪಾಲರಿಗೆ ವರದಿ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT