ಇದನ್ನು ಪ್ರಶ್ನಿಸಿ ವಿಮಾ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು. ‘ವಾಹನಕ್ಕೆ ವಿಮೆ ಮಾಡಿಸಿದ್ದ ಪಕ್ಷದಲ್ಲಿ ವಿಮಾ ಕಂಪನಿಯು ಅಪಘಾತದಲ್ಲಿ ಗಾಯಗೊಂಡವರಿಗೆ, ಅಂಗವೈಕಲ್ಯಕ್ಕೆ ಗುರಿಯಾದವರಿಗೆ ಪರಿಹಾರ ಒದಗಿಸಬೇಕಾಗುತ್ತದೆ. ಅಪಘಾತದಲ್ಲಿ ಯಾರಾದರೂ ಮೃತಪಟ್ಟವರೆ ಅವರ ಕುಟುಂಬದವರಿಗೆ ಪರಿಹಾರ ನೀಡುವ ಹೊಣೆ ವಿಮಾ ಕಂಪನಿಯದಾಗಿರುತ್ತದೆ. ಆದರೆ, ಅಂಜನ್ ಕುಮಾರ್ ಅವರದು ಸಹಜ ಸಾವು. ಹಾಗಾಗಿ ಕಾರ್ಮಿಕ ಆಯುಕ್ತರು ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು’ ಎಂದು ಕೋರಿತ್ತು.