<p><strong>ಬೆಂಗಳೂರು</strong>: ‘ಕಲ್ಲಡ್ಕ ಪ್ರಭಾಕರ ಭಟ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಬಿಜೆಪಿಯವರ ಬಳಿ ಅಧಿಕಾರ ಇದೆ. ಏನು ಬೇಕಾದರೂ ಮಾಡಿಕೊಳ್ಳಲಿ’ ಎಂದು ಶಾಸಕ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.</p>.<p>ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಆರ್ಎಸ್ಎಸ್, ಬಿಜೆಪಿ, ಇತರ ಸಂಘಟನೆಗಳು ಕನಕಪುರ ಚಲೋ ಆಯೋಜಿಸಿದ್ದ ಬಗ್ಗೆ ವರದಿಗಾರರೊಂದಿಗೆ ಸೋಮವಾರ ಮಾತನಾಡಿದರು.</p>.<p>‘ಯಾರು ಬೇಕಾದರೂ ಕನಕಪುರಕ್ಕೆ ಬರಲಿ. ಏನೇ ಮಾತನಾಡಿದರೂ, ಎಷ್ಟೇ ಬೈದರೂ ಸುಮ್ಮನಿರಬೇಕು. ಗಲಾಟೆ ಮಾಡುವುದು ಬೇಡ ಎಂದುಕಾರ್ಯಕರ್ತರಿಗೆ ಹೇಳಿದ್ದೇನೆ. ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದ್ದು, ಅಮೆರಿಕ, ಆಸ್ಟ್ರೇಲಿಯಾದಿಂದ ಫೋನ್ ಮಾಡಿ ಇಲ್ಲಿ ಏನಾಗುತ್ತಿದೆ ಎಂದು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>‘ಮಾಗಡಿ ರಸ್ತೆಯಲ್ಲಿ ಕೆಂಪೇಗೌಡ ಪ್ರಾಧಿಕಾರಕ್ಕೆ ಕ್ರಿಶ್ಚಿಯನ್ನರು 5 ಎಕರೆ ಜಾಗ ಬಿಟ್ಟುಕೊಟ್ಟಿದ್ದಾರೆ.ಶಾಸಕ ಕೆ.ಜೆ.ಜಾರ್ಜ್, ಆರ್ಚ್ ಬಿಷಪ್ ಅವರಿಗೆ ಮನವಿ ಮಾಡಿದಾಗ ಸ್ಪಂದಿಸಿ ಜಾಗ ಕೊಡಿಸಿದರು. ಕನಕಪುರ ಕ್ಷೇತ್ರದಲ್ಲಿ ಶಾಲೆಗಾಗಿ ಸರ್ಕಾರ ಜಾಗ ಕೇಳಿತು, ಜಾಗ ಕೊಟ್ಟಿದ್ದೇನೆ. ಆ ಶಾಲೆಗಳಲ್ಲಿ ಎಲ್ಲಾ ಸಮುದಾಯದ ಮಕ್ಕಳು ಓದುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಲ್ಲಡ್ಕ ಪ್ರಭಾಕರ ಭಟ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಬಿಜೆಪಿಯವರ ಬಳಿ ಅಧಿಕಾರ ಇದೆ. ಏನು ಬೇಕಾದರೂ ಮಾಡಿಕೊಳ್ಳಲಿ’ ಎಂದು ಶಾಸಕ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.</p>.<p>ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಆರ್ಎಸ್ಎಸ್, ಬಿಜೆಪಿ, ಇತರ ಸಂಘಟನೆಗಳು ಕನಕಪುರ ಚಲೋ ಆಯೋಜಿಸಿದ್ದ ಬಗ್ಗೆ ವರದಿಗಾರರೊಂದಿಗೆ ಸೋಮವಾರ ಮಾತನಾಡಿದರು.</p>.<p>‘ಯಾರು ಬೇಕಾದರೂ ಕನಕಪುರಕ್ಕೆ ಬರಲಿ. ಏನೇ ಮಾತನಾಡಿದರೂ, ಎಷ್ಟೇ ಬೈದರೂ ಸುಮ್ಮನಿರಬೇಕು. ಗಲಾಟೆ ಮಾಡುವುದು ಬೇಡ ಎಂದುಕಾರ್ಯಕರ್ತರಿಗೆ ಹೇಳಿದ್ದೇನೆ. ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದ್ದು, ಅಮೆರಿಕ, ಆಸ್ಟ್ರೇಲಿಯಾದಿಂದ ಫೋನ್ ಮಾಡಿ ಇಲ್ಲಿ ಏನಾಗುತ್ತಿದೆ ಎಂದು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>‘ಮಾಗಡಿ ರಸ್ತೆಯಲ್ಲಿ ಕೆಂಪೇಗೌಡ ಪ್ರಾಧಿಕಾರಕ್ಕೆ ಕ್ರಿಶ್ಚಿಯನ್ನರು 5 ಎಕರೆ ಜಾಗ ಬಿಟ್ಟುಕೊಟ್ಟಿದ್ದಾರೆ.ಶಾಸಕ ಕೆ.ಜೆ.ಜಾರ್ಜ್, ಆರ್ಚ್ ಬಿಷಪ್ ಅವರಿಗೆ ಮನವಿ ಮಾಡಿದಾಗ ಸ್ಪಂದಿಸಿ ಜಾಗ ಕೊಡಿಸಿದರು. ಕನಕಪುರ ಕ್ಷೇತ್ರದಲ್ಲಿ ಶಾಲೆಗಾಗಿ ಸರ್ಕಾರ ಜಾಗ ಕೇಳಿತು, ಜಾಗ ಕೊಟ್ಟಿದ್ದೇನೆ. ಆ ಶಾಲೆಗಳಲ್ಲಿ ಎಲ್ಲಾ ಸಮುದಾಯದ ಮಕ್ಕಳು ಓದುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>