‘ಎರಡು ದಿನಗಳಿಂದ ನಿರಂತರವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಇದು ಯಾರದೋ ಕೃತ್ಯ ಇರಬಹುದು ಎಂಬ ಅನುಮಾನ ಬಂದಿತ್ತು. ಹಾಗಾಗಿ, ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಪರಿಶೀಲನೆ ನಡೆಸಲು ಸೂಚಿಸಲಾಗಿತ್ತು. ರಾಜು ತನ್ನ ಸ್ನೇಹಿತರೊಡಗೂಡಿ ವಲಯದ ಏಳು ಕಡೆ ಬೆಂಕಿ ಇಟ್ಟಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.