ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸ ‘ದವಳಗಿರಿ’ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ‘ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನು ಯಾವುದೇ ಬದಲಾವಣೆ ಇಲ್ಲದೇ ವಿಧಾನಸಭೆಯಲ್ಲಿ ಸೋಮವಾರ ಮಂಡಿಸುತ್ತೇವೆ. ಈ ಕುರಿತು ಈಗಾಗಲೇ ಸ್ಪೀಕರ್ಗೆ ತಿಳಿಸಿದ್ದೇವೆ,’ ಎಂದು ಅವರು ತಿಳಿಸಿದರು.