ಸಾಮಾನ್ಯವಾಗಿ ಅಧಿಕಾರ ನಡೆಸುತ್ತಿದ್ದ ಪಕ್ಷದ ಸರ್ಕಾರ ಪತನಗೊಂಡು ಮತ್ತೊಂದು ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ವಿಧಾನಸಭೆ ಅಧ್ಯಕ್ಷ, ಉಪಾಧ್ಯಕ್ಷರು ರಾಜೀನಾಮೆ ನೀಡುವುದು ಸಂಪ್ರದಾಯವಾಗಿದೆ. ಕೆಲವು ಸಂದರ್ಭಗಳಲ್ಲಿ ಅವಿಶ್ವಾಸ ತಂದು ಪದಚ್ಯುತಿಗೊಳಿಸಲಾಗುತ್ತದೆ. ಅಧ್ಯಕ್ಷ ರಮೇಶ ಕುಮಾರ್ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಯಾವುದೇ ಚರ್ಚೆ, ವಿವಾದಕ್ಕೆ ಅವಕಾಶ ನೀಡದೆ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದರು. ಉಪಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ರಾಜೀನಾಮೆ ನೀಡದೆ ಮುಂದುವರೆದಿದ್ದಾರೆ.