ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಅಣೆಕಟ್ಟೆ ಯಲ್ಲಿರುವ ನೀರನ್ನು ಬಳಸಿಕೊಳ್ಳುವ ಸಂಪೂರ್ಣ ಹಕ್ಕು ನಮಗಿದೆ. ಇದಕ್ಕೆ ಅವಕಾಶ ನೀಡದಿದ್ದರೆ, ತೊರೆ ಕಾಡನೂರು ನೀರು ಸಂಗ್ರಹಣಾ ಕೇಂದ್ರಕ್ಕೆ ಮುತ್ತಿಗೆ ಹಾಕುತ್ತೇವೆ. ನೀರು ತಡೆಯುವ ಜೊತೆಗೆ ರಾಜ್ಯ ಹೆದ್ದಾರಿ ಬಂದ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.