ರಮೇಶ ಜಾರಕಿಹೊಳಿ ಬೆಂಬಲಿಗರಾದ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರನ್ನು ಅಥಣಿಯಲ್ಲಿ ಭೇಟಿಯಾದ ಸಚಿವ ಸತೀಶ, ಕೆಲವು ಸಮಯ ರಹಸ್ಯ ಮಾತುಕತೆ ನಡೆಸಿದರು. ‘ಆತುರದ ನಿರ್ಧಾರ ಕೈಗೊಳ್ಳಬೇಡಿ. ಅಲ್ಲದೇ, ಸೋದರ ರಮೇಶ ಮನವೊಲಿಸಲು ಸಹಕರಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು ಎನ್ನಲಾಗಿದೆ.