ಗರ್ಭಿಣಿ, ಬಾಣಂತಿ ಮತ್ತು 6 ವರ್ಷದೊಳಗಿನ ಮಕ್ಕಳಿಗೆ ವಿತರಿಸುವ ಆಹಾರ ಸಿದ್ಧಪಡಿಸಲು ಅಗತ್ಯವಿರುವ ಕಚ್ಚಾ ಸಾಮಗ್ರಿಗಳನ್ನು ಮಾರುಕಟ್ಟೆಯಿಂದ ಖರೀದಿಸಬೇಕು ಎಂಬ ನಿಯಮವಿದೆ. ಆದರೆ, ಇದನ್ನು ಖರೀದಿಸುವ ವಿಷಯದಲ್ಲಿ ಆಂತರಿಕ ಕಚ್ಚಾಟ ನಡೆದಿದೆ ಎನ್ನಲಾಗಿದೆ. ಈ ಕುರಿತಂತೆ ಶಾಸಕ ನಿಂಬಣ್ಣವರ, ಪದ್ಮಾವತಿ ಮತ್ತು ಎಂಎಸ್ಪಿಟಿಸಿ ಅಧ್ಯಕ್ಷೆ ಜಯಶ್ರೀ ದೇಸಾಯಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೊ ತುಣುಕು ಮೊಬೈಲ್ಗಳಲ್ಲಿ ಹರಿದಾಡುತ್ತಿದೆ.