<p><strong>ಬೆಂಗಳೂರು:</strong> ‘ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಬಂದಿರುವುದು ನಮ್ಮ ಹುರುಪು, ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ’ ಎಂದು ಕಾಂಗ್ರೆಸ್ನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.</p>.<p>ಮುಂಬರುವ ಲೋಕಸಭಾ ಚುನಾವಣಾ ತಯಾರಿಗಾಗಿ ಮಂಗಳವಾರ ಆಯೋಜಿಸಿದ್ದ ‘ಮಹಿಳಾ ಘಟಕದ ಪದಾಧಿಕಾರಿಗಳು, ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷೆಯರಿಗೆ ತರಬೇತಿ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.</p>.<p>‘ಪಕ್ಷ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು. ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಿ. ಪ್ರಿಯಾಂಕಾ ಗಾಂಧಿ ನಮಗೆ ಪ್ರೇರಣೆಯಾಗಿದ್ದು, ಕಾಂಗ್ರೆಸ್ ಅವಧಿಯ ಸಾಧನೆಗಳನ್ನು ಮನೆ–ಮನೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>‘ಮಹಿಳೆಯರು ರಾಜಕೀಯಕ್ಕೆ ಬರುವುದು ಸಕಾರಾತ್ಮಕ ಬೆಳವಣಿಗೆ. ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ 33 ರಷ್ಟು ಮೀಸಲಾತಿ ನೀಡಬೇಕೆಂಬುದು ಪಕ್ಷದ ನಿಲುವಾಗಿದೆ’ ಎಂದು ತಿಳಿಸಿದರು.</p>.<p>ರಾಜ್ಯ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಜನಕ್ ಡಿಸೋಜಾ, ‘ಇಂದಿರಾಗಾಂಧಿ ಎಲ್ಲರಿಗೂ ಸ್ಫೂರ್ತಿಯಾಗಿದ್ದು. ಅವರನ್ನು ಮಾದರಿಯಾಗಿಟ್ಟುಕೊಂಡು ಪಕ್ಷ ಕಟ್ಟಬೇಕು. ಸೋನಿಯಾ ಗಾಂಧಿ ನಾಯಕತ್ವದಲ್ಲಿ 2004ರಿಂದ 2014ರ ವರೆಗೆ ಕೇಂದ್ರ ಸರ್ಕಾರ ಮಾಡಿದ ಸಾಧನೆಗಳನ್ನು ಜನರಿಗೆ ತಿಳಿಸಬೇಕು’ ಎಂದು ಹೇಳಿದರು.</p>.<p>ಪಕ್ಷದ ಮುಖಂಡರಾದ ಮಾರ್ಗರೇಟ್ ಆಳ್ವ, ಶಾಸಕ ರಾಮಲಿಂಗಾ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ ಅವರು ಚುನಾವಣೆ ಎದುರಿಸುವ ಬಗೆ, ಮತದಾರರ ಮನವನ್ನು ಒಲಿಸುವ ವಿಧಾನ ಹಾಗೂ ಮತದಾನದ ಮಹತ್ವದ ಕುರಿತು ಸಲಹೆ–ಸೂಚನೆಗಳನ್ನು ಪದಾಧಿಕಾರಿಗಳಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಬಂದಿರುವುದು ನಮ್ಮ ಹುರುಪು, ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ’ ಎಂದು ಕಾಂಗ್ರೆಸ್ನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.</p>.<p>ಮುಂಬರುವ ಲೋಕಸಭಾ ಚುನಾವಣಾ ತಯಾರಿಗಾಗಿ ಮಂಗಳವಾರ ಆಯೋಜಿಸಿದ್ದ ‘ಮಹಿಳಾ ಘಟಕದ ಪದಾಧಿಕಾರಿಗಳು, ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷೆಯರಿಗೆ ತರಬೇತಿ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.</p>.<p>‘ಪಕ್ಷ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು. ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಿ. ಪ್ರಿಯಾಂಕಾ ಗಾಂಧಿ ನಮಗೆ ಪ್ರೇರಣೆಯಾಗಿದ್ದು, ಕಾಂಗ್ರೆಸ್ ಅವಧಿಯ ಸಾಧನೆಗಳನ್ನು ಮನೆ–ಮನೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.</p>.<p>‘ಮಹಿಳೆಯರು ರಾಜಕೀಯಕ್ಕೆ ಬರುವುದು ಸಕಾರಾತ್ಮಕ ಬೆಳವಣಿಗೆ. ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಶೇ 33 ರಷ್ಟು ಮೀಸಲಾತಿ ನೀಡಬೇಕೆಂಬುದು ಪಕ್ಷದ ನಿಲುವಾಗಿದೆ’ ಎಂದು ತಿಳಿಸಿದರು.</p>.<p>ರಾಜ್ಯ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಜನಕ್ ಡಿಸೋಜಾ, ‘ಇಂದಿರಾಗಾಂಧಿ ಎಲ್ಲರಿಗೂ ಸ್ಫೂರ್ತಿಯಾಗಿದ್ದು. ಅವರನ್ನು ಮಾದರಿಯಾಗಿಟ್ಟುಕೊಂಡು ಪಕ್ಷ ಕಟ್ಟಬೇಕು. ಸೋನಿಯಾ ಗಾಂಧಿ ನಾಯಕತ್ವದಲ್ಲಿ 2004ರಿಂದ 2014ರ ವರೆಗೆ ಕೇಂದ್ರ ಸರ್ಕಾರ ಮಾಡಿದ ಸಾಧನೆಗಳನ್ನು ಜನರಿಗೆ ತಿಳಿಸಬೇಕು’ ಎಂದು ಹೇಳಿದರು.</p>.<p>ಪಕ್ಷದ ಮುಖಂಡರಾದ ಮಾರ್ಗರೇಟ್ ಆಳ್ವ, ಶಾಸಕ ರಾಮಲಿಂಗಾ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ ಅವರು ಚುನಾವಣೆ ಎದುರಿಸುವ ಬಗೆ, ಮತದಾರರ ಮನವನ್ನು ಒಲಿಸುವ ವಿಧಾನ ಹಾಗೂ ಮತದಾನದ ಮಹತ್ವದ ಕುರಿತು ಸಲಹೆ–ಸೂಚನೆಗಳನ್ನು ಪದಾಧಿಕಾರಿಗಳಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>