ಬೆಂಗಳೂರು: ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ತಾಯಿಯೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೆಬ್ಬಾಳದಲ್ಲಿ ನಡೆದಿದೆ.
'ಮನೋರಾಯನಪಾಳ್ಯದ ನಿವಾಸಿ ಪುಷ್ಪಾವತಿ ತನ್ನ 7 ವರ್ಷದ ಮಗ ಹಾಗೂ 5 ತಿಂಗಳ ಕೂಸಿಗೆ ವಿಷ ಹಾಕಿ ಕೊಂದಿದ್ದಾಳೆ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ' ಎಂದು ಹೆಬ್ಬಾಳ ಪೊಲೀಸರು ತಿಳಿಸಿದರು.
'ಖಾಸಗಿ ಕಂಪನಿಯಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ನಾಗರಾಜ್ ಎಂಬುವರಿಗೆ ಪುಷ್ಟಾವತಿಯನ್ನು ಮದುವೆ ಮಾಡಿಕೊಡಲಾಗಿತ್ತು. ಮನೆಯಲ್ಲಿ ಮರಣಪತ್ರ ಸಿಕ್ಕಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಘಟನೆಗೆ ಕಾರಣವೇನೆಂದು ಸ್ಪಷ್ಟವಾಗಿಲ್ಲ.