ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಪ್ರಧಾನ ನಿರ್ದೇಶಕ ತ್ರಿಲೋಚನ್ ಮಹಾಪಾತ್ರ, ‘ಮಹಿಳಾ ವಿಜ್ಞಾನಿಗಳನ್ನು ಉತ್ತೇಜಿಸಲು ಹಲವು ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ಆದರೂ, ವಿಶ್ವದಲ್ಲಿ ಹೋಲಿಸಿದರೆ, ಭಾರತದಲ್ಲಿ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಬರುವ ಮಹಿಳೆಯರ ಸಂಖ್ಯೆ ಕಡಿಮೆ ಇದೆ’ ಎಂದರು.