ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಗಂಡ ಸತ್ತ ಬಳಿಕ ಹೆಣ್ಣುಮಕ್ಕಳು ರಾಜಕೀಯಕ್ಕೆ ಬರಬಾರದು ಎಂಬ ಕಾನೂನಿಲ್ಲ. ಗಂಡ ಸತ್ತು ನಿರ್ಧಿಷ್ಟ ಸಮಯ ಆಗುವವರೆಗೂ ರಾಜಕೀಯಕ್ಕೆ ಬರಬಾರದು ಎಂಬ ನಿಯಮವೂ ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ರೇವಣ್ಣ ಮಹಿಳೆಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ತಕ್ಷಣ ಸುಮಲತಾ ಅವರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.