ಕಾಂಗ್ರೆಸ್ ಶಾಸಕರಾದ ಜಿ.ಎಚ್. ಶ್ರೀನಿವಾಸ್ (ತರೀಕೆರೆ) ಜೆಡಿಎಸ್ ಸೇರಿದ್ದಾರೆ. ಕಿತ್ತೂರು ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೆ, ಅನಾರೋಗ್ಯದ ಕಾರಣದಿಂದ ಅವಕಾಶ ನಿರಾಕರಿಸಲಾಗಿದೆ ಎಂಬ ಮಾಹಿತಿ ಬಂದ ಕಾರಣ, ಅಲ್ಲಿನ ಕಾಂಗ್ರೆಸ್ ಶಾಸಕ ಡಿ.ಬಿ. ಇನಾಮದಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.