ಗ್ರಾಮೀಣ ಪ್ರದೇಶದಲ್ಲಿ ಅವರು ಸಲ್ಲಿಸಿರುವ ವೈದ್ಯಕೀಯ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾನಸ ಆಸ್ಪತ್ರೆ ಸಮೂಹದಿಂದ ನಡೆಸಲಾದ ಶಿಬಿರಗಳಲ್ಲಿ 50 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಉಚಿತವಾಗಿ ನೇತ್ರ ಚಿಕಿತ್ಸೆ ಮಾಡಿದ್ದಾರೆ. ವೃದ್ಧಾಶ್ರಮದ ಮೂಲಕ ಹಿರಿಯ ಚೇತನಗಳಿಗೆ ಆಸರೆಯಾಗಿದ್ದಾರೆ. ಪರಿಸರ ರಕ್ಷಣೆಗಾಗಿ 1 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಯೋಜನೆ ಕೈಗೊಂಡಿದ್ದಾರೆ.