ಬೆಂಗಳೂರು:ವಿಶ್ವ ಪರಿಸರ ದಿನ ಪ್ರಯುಕ್ತ ಬುಧವಾರ ಇಲ್ಲಿ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್.ಧರ್ಮೇಗೌಡ ಪ್ರಶಸ್ತಿ ಪ್ರದಾನ ಮಾಡಿದರು.
ವ್ಯಕ್ತಿ ವಿಭಾಗದಲ್ಲಿ ಕೆಂಪಸಿದ್ದೇ ಗೌಡ, ಡಾ.ತಿಪ್ಪೇಕಾಳಿ ರಂಗನಾಥ್, ಬಸವರಾಜ್ ಬಸಪ್ಪ ಇಂದೂರ ಹಾಗೂ ಸಂಘ ಸಂಸ್ಥೆ ವಿಭಾಗದಲ್ಲಿ ಸಹಜ ಸಮೃದ್ಧ, ಉತ್ತರ ಕನ್ಬಡ ನಗರಾಭಿವೃದ್ಧಿ ಕೋಶ, ಕೊಪ್ಪಳ ನಗರಸಭೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಸದ ತೇಜಸ್ವಿ ಸೂರ್ಯ, ಶಾಸಕ ಡಾ.ಅಶ್ವತ್ಥನಾರಾಯಣ, ವಿಧಾನ ಪರಿಸತ್ ಸದಸ್ಯ ಶರವಣ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಜಯರಾಂ, ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಅರವಿಂದ ವರ್ಮಾ ಇದ್ದರು.