ನಂತರ ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ, ‘ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತನ ಕೊಲೆ ವಿಷಯ ತಿಳಿದು ಉದ್ವೇಗದಲ್ಲಿ ಹಾಗೆ ಹೇಳಿದ್ದೇನೆ; ಸಿಎಂ ಆಗಿ ಆ ಆದೇಶ ನೀಡಿಲ್ಲ’ ಎಂದು ಹೇಳಿದ್ದಾರೆ. ‘ಮಂಡ್ಯಕ್ಕೆ ನಾಳೆ ಬೆಳಿಗ್ಗೆ ಭೇಟಿ ನೀಡಲಿದ್ದೇನೆ. ಸಾರ್ವಜನಿಕರು ಉದ್ವೇಗಕ್ಕೆ ಒಳಗಾಗಬಾರದು’ ಎಂದು ಮನವಿ ಮಾಡಿಕೊಂಡಿದ್ದಾರೆ.