ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಮಾತು ನಡೆಯುತ್ತಿಲ್ಲ: ಸಿ.ಎಂ. ಇಬ್ರಾಹಿಂ

ಮಾಧ್ಯಮಗಳಲ್ಲಿ ಮಾತ್ರ ಮೋದಿ ಅಲೆ: ಫೈಲ್ ಕಾಪಾಡದವರು ಚೌಕಿದಾರ್ ಹೇಗಾಗುತ್ತಾರೆ
Last Updated 2 ಏಪ್ರಿಲ್ 2019, 9:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಿಜೆಪಿಯಲ್ಲಿ ಬಿ.ಎಲ್. ಸಂತೋಷ್ ಅವರು ಮಾತಿಗೆ ಮನ್ನಣೆ ಸಿಗುತ್ತಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಮಾತು ನಡೆಯುತ್ತಿಲ್ಲ. ದಿ. ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ತಪ್ಪಿದಾಗಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಿತ್ತು ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಿಚಾಯಿಸಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಒಂದೂ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ, ಎಲ್ಲರೂ ಸೇರಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕಾಗಿದೆ ಎಂದು ಹೇಳಿದ್ದೇವೆ. ಕಚೇರಿಯ ಕಡತ ಕಾಪಾಡಲು ಆಗದವರು ಚೌಕೀದಾರ್ ಹೇಗಾಗುತ್ತಾರೆ? ದೇಶದಲ್ಲಿ ಮೋದಿ ವಿರುದ್ಧ ಅಲೆ ಇದೆ. ಆದರೆ, ಮಾಧ್ಯಮಗಳಲ್ಲಿ ಮಾತ್ರ ಮೋದಿ ಪರ ಅಲೆ ಇದೆ ಎಂದರು.

ಧಾರವಾಡ ಕ್ಷೇತ್ರದ ಅಭ್ಯರ್ಥಿ ಘೋಷಣೆ ಸ್ವಲ್ಪ ವಿಳಂಬವಾಗಿದ್ದು, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT