ಕಾಂಗ್ರೆಸ್ನ 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಗಿಲ್ಲ. ಅವರ ವಿರುದ್ಧ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್, ಜೆಡಿಎಸ್ ಮುಖಂಡರ ಕಚ್ಚಾಟ ಉಲ್ಬಣವಾಗಲಿದ್ದು, ರಾಜ್ಯ ರಾಜಕೀಯದ ಮೇಲೆ ಇದರ ಪರಿಣಾಮ ಏನಾದರೂ ಆಗಬಹುದು ಎಂದು ಸೂಕ್ಷ್ಮವಾಗಿ ಹೇಳಿದರು.