‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಕುಂಬ್ಳೆ ಶ್ರೀಧರ ರಾವ್(ಸ್ತ್ರೀ ವೇಷಧಾರಿ), ಮೋಹನ್ ಬೈಪಡಿತ್ತಾಯ (ಚಂಡೆ–ಮದ್ದಳೆ ವಾದಕ), ಮಣೂರು ನರಸಿಂಹ ಮಧ್ಯಸ್ಥ (ಯಕ್ಷಗಾನ ಗುರುಗಳು), ನಿತ್ಯಾನಂದ ಹೆಬ್ಬಾರ್ (ಮದ್ದಳೆ), ಕೃಷ್ಣ ಮಾಣಿ ಅಗೇರ (ಯಕ್ಷಗಾನ ಭಾಗವತರು), ಭಾಸ್ಕರ ಜೋಶಿ ಶಿರಳಗಿ (ಸ್ತ್ರೀ ಪಾತ್ರ), ಎಸ್.ಪಿ.ಮುನಿಕೆಂಪಯ್ಯ (ಮೂಡಲಪಾಯ), ನಾರಾಯಣಸ್ವಾಮಿ (ಮುಖವೀಣೆ), ಪಿ. ಶಾಂತಾರಾಮ ಪ್ರಭು (ತಾಳಮದ್ದಳೆ), ಮಂದಗಲ್ಲು ಆನಂದ ಭಟ್ (ಯಕ್ಷಗಾನ ವೇಷಧಾರಿ) ಅವರು ಪಾತ್ರರಾಗಿದ್ದು, ₹ 25 ಸಾವಿರ ನಗದು ಬಹುಮಾನ ನೀಡಲಾಗುವುದು.