<p><strong>ಉಡುಪಿ:</strong> ಬೈಂದೂರು ತಾಲ್ಲೂಕಿನ ಯಳಜಿತ ಗ್ರಾಮದ ಜೋಗಿಜಡ್ಡು ಎಂಬಲ್ಲಿ ಭಾನುವಾರ ರಾತ್ರಿ ಯಕ್ಷಗಾನ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಖ್ಯಾತ ಯಕ್ಷಗಾನ ಕಲಾವಿದ ಹುಡುಗೋಡು ಚಂದ್ರಹಾಸ (52) ರಂಗಸ್ಥಳದಲ್ಲಿಯೇ ಮೃತಪಟ್ಟರು.</p>.<p>ಕಲಾಧರ ಯಕ್ಷಗಾನ ಬಳಗ ಜಲವಳ್ಳಿ, ಈ ಮೇಳದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನದಲ್ಲಿ ಅತಿಥಿ ಕಲಾವಿದರಾಗಿ ಭಾಗವಹಿಸಿ ಕುಣಿಯುತ್ತಿದ್ದಾಗ ರಂಗದಲ್ಲಿ ಹುಡುಗೋಡು ಚಂದ್ರಹಾಸ ಅವರು ಕುಸಿದು ಬಿದ್ದರು.</p>.<p>ಚಂದ್ರಹಾಸ ಅವರು ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಕಲಾವಿದರು. ಭೀಷ್ಮವಿಜಯದ ಸಾಲ್ವನ ಪಾತ್ರ ಅವರಿಗೆ ಹೆಸರು ತಂದುಕೊಟ್ಟಿತ್ತು. ಭಾನುವಾರ ಕೂಡ ಅವರು ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸುತ್ತಿದ್ದರು. ಸಾಲ್ವ ಹಾಗೂ ಭೀಷ್ಮನ ಸಂಭಾಷಣೆಯ ಮಧ್ಯೆ ಕುಸಿದು ಬಿದ್ದರು.</p>.<p>ಚಂದ್ರಹಾಸ ಹುಡಗೋಡ್ ಫೇಸ್ಬುಕ್ ಖಾತೆಯಿಂದ ಪ್ರಸಂಗ ಲೈವ್ ಮಾಡಲಾಗುತ್ತಿತ್ತು. ಚಂದ್ರಹಾಸ ಅವರು ಹೊನ್ನಾವರ ಸಮೀಪದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದರು.</p>.<p>ಹೃದಯಾಘಾತದಿಂದ ರಂಗದ ಮೇಲೆಯೇ ಕುಸಿದ ಅವರನ್ನು ತಕ್ಷಣವೇ ಬೈಂದೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಂದ್ರಹಾಸ ಅವರಪುತ್ರ ಪ್ರದೀಪ್ ಸಹ ಪ್ರಸಂಗದಲ್ಲಿ ಭಾಗಿಯಾಗಿದ್ದರು. ಇಡೀ ರಾತ್ರಿಯ ಪ್ರದರ್ಶನವನ್ನು ರದ್ದುಪಡಿಸಲಾಯಿತು.</p>.<p>ಹುಡುಗೋಡು ಚಂದ್ರಹಾಸ ಅವರು ಬಡಗುತಿಟ್ಟಿನ ಖ್ಯಾತ ಡೇರೆ ಮೇಳಗಳಾದ ಪೆರ್ಡೂರು, ಸಾಲಿಗ್ರಾಮ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಕಳೆದ 3 ವರ್ಷಗಳಿಂದ ಕೇವಲ ಅತಿಥಿ ಕಲಾವಿದರಾಗಿ ಮಾತ್ರ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರಸಂಗಗಳಲ್ಲಿ ಖಳನ ಪಾತ್ರ ನಿರ್ವಹಿಸುತ್ತಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಬೈಂದೂರು ತಾಲ್ಲೂಕಿನ ಯಳಜಿತ ಗ್ರಾಮದ ಜೋಗಿಜಡ್ಡು ಎಂಬಲ್ಲಿ ಭಾನುವಾರ ರಾತ್ರಿ ಯಕ್ಷಗಾನ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಖ್ಯಾತ ಯಕ್ಷಗಾನ ಕಲಾವಿದ ಹುಡುಗೋಡು ಚಂದ್ರಹಾಸ (52) ರಂಗಸ್ಥಳದಲ್ಲಿಯೇ ಮೃತಪಟ್ಟರು.</p>.<p>ಕಲಾಧರ ಯಕ್ಷಗಾನ ಬಳಗ ಜಲವಳ್ಳಿ, ಈ ಮೇಳದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನದಲ್ಲಿ ಅತಿಥಿ ಕಲಾವಿದರಾಗಿ ಭಾಗವಹಿಸಿ ಕುಣಿಯುತ್ತಿದ್ದಾಗ ರಂಗದಲ್ಲಿ ಹುಡುಗೋಡು ಚಂದ್ರಹಾಸ ಅವರು ಕುಸಿದು ಬಿದ್ದರು.</p>.<p>ಚಂದ್ರಹಾಸ ಅವರು ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಕಲಾವಿದರು. ಭೀಷ್ಮವಿಜಯದ ಸಾಲ್ವನ ಪಾತ್ರ ಅವರಿಗೆ ಹೆಸರು ತಂದುಕೊಟ್ಟಿತ್ತು. ಭಾನುವಾರ ಕೂಡ ಅವರು ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸುತ್ತಿದ್ದರು. ಸಾಲ್ವ ಹಾಗೂ ಭೀಷ್ಮನ ಸಂಭಾಷಣೆಯ ಮಧ್ಯೆ ಕುಸಿದು ಬಿದ್ದರು.</p>.<p>ಚಂದ್ರಹಾಸ ಹುಡಗೋಡ್ ಫೇಸ್ಬುಕ್ ಖಾತೆಯಿಂದ ಪ್ರಸಂಗ ಲೈವ್ ಮಾಡಲಾಗುತ್ತಿತ್ತು. ಚಂದ್ರಹಾಸ ಅವರು ಹೊನ್ನಾವರ ಸಮೀಪದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದರು.</p>.<p>ಹೃದಯಾಘಾತದಿಂದ ರಂಗದ ಮೇಲೆಯೇ ಕುಸಿದ ಅವರನ್ನು ತಕ್ಷಣವೇ ಬೈಂದೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಂದ್ರಹಾಸ ಅವರಪುತ್ರ ಪ್ರದೀಪ್ ಸಹ ಪ್ರಸಂಗದಲ್ಲಿ ಭಾಗಿಯಾಗಿದ್ದರು. ಇಡೀ ರಾತ್ರಿಯ ಪ್ರದರ್ಶನವನ್ನು ರದ್ದುಪಡಿಸಲಾಯಿತು.</p>.<p>ಹುಡುಗೋಡು ಚಂದ್ರಹಾಸ ಅವರು ಬಡಗುತಿಟ್ಟಿನ ಖ್ಯಾತ ಡೇರೆ ಮೇಳಗಳಾದ ಪೆರ್ಡೂರು, ಸಾಲಿಗ್ರಾಮ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಕಳೆದ 3 ವರ್ಷಗಳಿಂದ ಕೇವಲ ಅತಿಥಿ ಕಲಾವಿದರಾಗಿ ಮಾತ್ರ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರಸಂಗಗಳಲ್ಲಿ ಖಳನ ಪಾತ್ರ ನಿರ್ವಹಿಸುತ್ತಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>