ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ 'ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಿಗೆ ರೈಲು ಸೇವೆ ದೊರೆತಿಲ್ಲ. ಕರಾವಳಿ ಭಾಗದ ಸಾಕಷ್ಟು ಜನ ಬೆಂಗಳೂರಿನಲ್ಲಿ ಇದ್ದಾರೆ. ಹಬ್ಬಗಳ ಸಂದರ್ಭದಲ್ಲಿ ಕರಾವಳಿ ಜನರು ಟ್ಯಾಕ್ಸಿ ಮಾಡಿಕೊಂಡು ಊರಿಗೆ ಹೋಗುತ್ತಾರೆ. ಹೊಸ ರೈಲಿನಿಂದ ನಮ್ಮ ಭಾಗದ ಜನರ ನಿರೀಕ್ಷೆ ಈಗ ಈಡೇರಿದೆ. ಉಡುಪಿ, ಭಟ್ಕಳ, ಕಾರವಾರ ಮಾರ್ಗದಲ್ಲಿ ಈ ಹೊಸ ರೈಲು ಸಂಚರಿಸಲಿದೆ' ಎಂದು ಹೇಳಿದರು.