‘ರಾಜ್ಯದ ಹಲವು ಕಡೆ ಅತಿವೃಷ್ಟಿಯಾಗಿ ಜನರು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಆಸ್ತಿ ಪಾಸ್ತಿ, ಪ್ರಾಣ ಹಾನಿ, ಬೆಳೆ ನಷ್ಟ ಸಂಭವಿಸಿದೆ. ಅಂದಾಜು ₹ 35 ಸಾವಿರ ಕೋಟಿ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಇದೆಲ್ಲರ ಬಗ್ಗೆ ಚರ್ಚಿಸಲು ಸಾಕಷ್ಟು ಸಮಯಾವಕಾಶ ಬೇಕು. ಕೇವಲ 3 ದಿನ ಅಧಿವೇಶನ ನಡೆಸಿದರೆ ಸಾಲದು, 8ರಿಂದ 10 ದಿನಗಳವರೆಗೆ ವಿಸ್ತರಿಸಬೇಕು’ ಎಂದು ಅವರು ಒತ್ತಾಯಿಸಿದರು.