<p><strong>ಬೆಳಗಾವಿ:</strong> ‘ಶಾಸಕ, ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಯಿಂದ ಸರ್ಕಾರದಲ್ಲಿ ಅಸ್ಥಿರತೆ ಮೂಡಲು ಸಾಧ್ಯತೆ ಇದೆ. ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗಬಹುದು’ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.</p>.<p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿ ಆಂತರಿಕ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ. ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವುದನ್ನು ಆ ಪಕ್ಷದವರೇ ನಿರ್ಧರಿಸುತ್ತಾರೆ. ಆದರೆ, ಆ ಪಕ್ಷದ ಶಾಸಕರ ಭಿನ್ನಾಭಿಪ್ರಾಯದಿಂದ ಸರ್ಕಾರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎನ್ನುವುದು ನನ್ನ ಅಭಿಪ್ರಾಯ’ ಎಂದರು.</p>.<p>‘ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳನ್ನು ನೋಡಿದರೆ, ಮಧ್ಯಂತರ ಚುನಾವಣೆ ಎದುರಾದರೂ ಆಶ್ಚರ್ಯವಿಲ್ಲ’ ಎಂದು ನುಡಿದರು.</p>.<p><strong>ಅಧಿವೇಶನ ವಿಸ್ತರಿಸಿ:</strong></p>.<p>‘ರಾಜ್ಯದ ಹಲವು ಕಡೆ ಅತಿವೃಷ್ಟಿಯಾಗಿ ಜನರು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಆಸ್ತಿ ಪಾಸ್ತಿ, ಪ್ರಾಣ ಹಾನಿ, ಬೆಳೆ ನಷ್ಟ ಸಂಭವಿಸಿದೆ. ಅಂದಾಜು ₹ 35 ಸಾವಿರ ಕೋಟಿ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಇದೆಲ್ಲರ ಬಗ್ಗೆ ಚರ್ಚಿಸಲು ಸಾಕಷ್ಟು ಸಮಯಾವಕಾಶ ಬೇಕು. ಕೇವಲ 3 ದಿನ ಅಧಿವೇಶನ ನಡೆಸಿದರೆ ಸಾಲದು, 8ರಿಂದ 10 ದಿನಗಳವರೆಗೆ ವಿಸ್ತರಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಶಾಸಕ, ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಯಿಂದ ಸರ್ಕಾರದಲ್ಲಿ ಅಸ್ಥಿರತೆ ಮೂಡಲು ಸಾಧ್ಯತೆ ಇದೆ. ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗಬಹುದು’ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.</p>.<p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿ ಆಂತರಿಕ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ. ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವುದನ್ನು ಆ ಪಕ್ಷದವರೇ ನಿರ್ಧರಿಸುತ್ತಾರೆ. ಆದರೆ, ಆ ಪಕ್ಷದ ಶಾಸಕರ ಭಿನ್ನಾಭಿಪ್ರಾಯದಿಂದ ಸರ್ಕಾರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎನ್ನುವುದು ನನ್ನ ಅಭಿಪ್ರಾಯ’ ಎಂದರು.</p>.<p>‘ಬಿಜೆಪಿ ಶಾಸಕರ ವಿಭಿನ್ನ ಹೇಳಿಕೆಗಳನ್ನು ನೋಡಿದರೆ, ಮಧ್ಯಂತರ ಚುನಾವಣೆ ಎದುರಾದರೂ ಆಶ್ಚರ್ಯವಿಲ್ಲ’ ಎಂದು ನುಡಿದರು.</p>.<p><strong>ಅಧಿವೇಶನ ವಿಸ್ತರಿಸಿ:</strong></p>.<p>‘ರಾಜ್ಯದ ಹಲವು ಕಡೆ ಅತಿವೃಷ್ಟಿಯಾಗಿ ಜನರು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಆಸ್ತಿ ಪಾಸ್ತಿ, ಪ್ರಾಣ ಹಾನಿ, ಬೆಳೆ ನಷ್ಟ ಸಂಭವಿಸಿದೆ. ಅಂದಾಜು ₹ 35 ಸಾವಿರ ಕೋಟಿ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ. ಇದೆಲ್ಲರ ಬಗ್ಗೆ ಚರ್ಚಿಸಲು ಸಾಕಷ್ಟು ಸಮಯಾವಕಾಶ ಬೇಕು. ಕೇವಲ 3 ದಿನ ಅಧಿವೇಶನ ನಡೆಸಿದರೆ ಸಾಲದು, 8ರಿಂದ 10 ದಿನಗಳವರೆಗೆ ವಿಸ್ತರಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>