ಯಾರಿಗೆಲ್ಲ ಬಂಪರ್:ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾರಿಗೆಲ್ಲ ಬಂಪರ್ ಕೊಡುಗೆ ಸಿಗಬಹುದು ಎಂಬ ಲೆಕ್ಕಾಚಾರ ನಡೆದಿದೆ. ಹಿರಿಯ ನಾಯಕರಾದ ಜಗದೀಶಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಸುರೇಶ್ ಕುಮಾರ್,ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಶಿಕಲಾ ಜೊಲ್ಲೆ ಮುಂತಾದವರ ಹೆಸರು ಚಾಲ್ತಿಯಲ್ಲಿದ್ದರೂ, ಇವರಲ್ಲಿ ಕೆಲವರು ಮಾತ್ರ ಸಂಪುಟದಲ್ಲಿ ಸ್ಥಾನ ಪಡೆಯಬಹುದು.