ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಶುಕ್ರವಾರ ಸಂಜೆ ಈಕುರಿತು ಹೇಳಿಕೆ ನೀಡಿದ್ದು, ‘ಜುಲೈ ತಿಂಗಳಲ್ಲಿ ಅನುಮೋದನೆಗೊಂಡಿರುವ ಎಲ್ಲ ಹೊಸ ಕಾಮಗಾರಿಗಳ ಸಂಬಂಧಿತ ಆದೇಶಗಳನ್ನು ಮುಂದಿನ ಆದೇಶ ಆಗುವವರೆಗೆ ತಡೆಹಿಡಿಯುವಂತೆ ಸರ್ಕಾರದ ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲು ಸೂಚಿಸಿದ್ದಾರೆ’ ಎಂದು ಹೇಳಿದ್ದಾರೆ.