ಪ್ರವಾಹ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ತುರ್ತಾಗಿ ₹ 5,000 ಕೋಟಿ ನೆರವು ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಎರಡು ತಿಂಗಳ ಬಳಿಕ ಕೇಂದ್ರ ಸರ್ಕಾರ 1,200 ಕೋಟಿ ನೀಡಿದೆ. ಇಲ್ಲಿಯವರೆಗೂ ರಾಜ್ಯ ಸರ್ಕಾರವೇ ತನ್ನ ಬೊಕ್ಕಸದ ಹಣವನ್ನು ಬಳಕೆ ಮಾಡಬೇಕಿತ್ತು. ಅದನ್ನೂ ಸರಿಯಾಗಿ ಮಾಡಿಲ್ಲ ಎಂದು ಟೀಕಿಸಿದರು.