<p><strong>ಹುಬ್ಬಳ್ಳಿ:</strong> ಸಿದ್ದರಾಮಯ್ಯ ಸರ್ಕಾರವನ್ನು ಪ್ರಧಾನಿ ಮೋದಿ ಅವರು ಶೇ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಲೇವಡಿ ಮಾಡಿದ್ದರು. ಆದರೆ, ಈಗಿನ ರಾಜ್ಯ ಬಿಜೆಪಿ ಸರ್ಕಾರ ಶೇ 20 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದುವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿವಾಗ್ದಾಳಿ ನಡೆಸಿದ್ದಾರೆ.</p>.<p>ಭ್ರಷ್ಟಾಚಾರ ಅತಿಯಾಗಿದೆ. ಜನಸಾಮಾನ್ಯರು ದುಡ್ಡು ಕೊಡದೇ ಯಾವುದೇ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಬೆಳಗಾವಿ ವಿಭಾಗ ಮಟ್ಟದ ಜೆಡಿಎಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಎಎಪಿ ಮಾದರಿಯಲ್ಲಿ ಜೆಡಿಎಸ್ ಅನ್ನು ಕಟ್ಟಿಬೆಳೆಸಬೇಕಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಪಕ್ಷವನ್ನು ಕಟ್ಟಿಬೆಳೆಸಬೇಕಾಗಿದೆ ಎಂದರು.</p>.<p><strong>ಪುಸ್ತಕ ಬಿಡುಗಡೆ:</strong> ದೇವನೂರು ಮಹಾದೇವ ಅವರ 'ಈಗ ಭಾರತ ಮಾತನಾಡುತ್ತಿದೆ...' ಹಾಗೂ ಜೆಡಿಎಸ್ ಹೊರತಂದಿರುವ 'ಉತ್ತರ ಕರ್ನಾಟಕಕ್ಕೆ ದೇವೇಗೌಡರ ಕೊಡುಗೆ' ಎಂಬ ಎರಡು ಪುಸ್ತಕಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಿದರು.</p>.<p>'ನಾನು ರಾಜಕೀಯ ಪ್ರವೇಶಿಸಿ 59 ವರ್ಷವಾಯಿತು. ಅನೇಕ ಏಳುಬೀಳು ಕಂಡಿದ್ದೇನೆ. ಜೆಡಿಎಸ್ ಕೇವಲ ಹಳೇ ಮೈಸೂರಿಗೆ ಸೀಮಿತ, ದೇವೇಗೌಡ ಜಾತಿವಾದಿ, ಉತ್ತರ ಕರ್ನಾಟಕಕ್ಕೆ ಏನೂ ಮಾಡಿಲ್ಲ ಎಂದು ಬಿಂಬಿಸಲಾಗುತ್ತಿದೆ. ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು' ಎಂದರು. ವೈಎಸ್ವಿ ದತ್ತ, ಕೋನರಡ್ಡಿ, ತಿಪ್ಪೇಸ್ವಾಮಿ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಸಿದ್ದರಾಮಯ್ಯ ಸರ್ಕಾರವನ್ನು ಪ್ರಧಾನಿ ಮೋದಿ ಅವರು ಶೇ 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಲೇವಡಿ ಮಾಡಿದ್ದರು. ಆದರೆ, ಈಗಿನ ರಾಜ್ಯ ಬಿಜೆಪಿ ಸರ್ಕಾರ ಶೇ 20 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದುವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿವಾಗ್ದಾಳಿ ನಡೆಸಿದ್ದಾರೆ.</p>.<p>ಭ್ರಷ್ಟಾಚಾರ ಅತಿಯಾಗಿದೆ. ಜನಸಾಮಾನ್ಯರು ದುಡ್ಡು ಕೊಡದೇ ಯಾವುದೇ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಬೆಳಗಾವಿ ವಿಭಾಗ ಮಟ್ಟದ ಜೆಡಿಎಸ್ ಕಾರ್ಯಕರ್ತರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಎಎಪಿ ಮಾದರಿಯಲ್ಲಿ ಜೆಡಿಎಸ್ ಅನ್ನು ಕಟ್ಟಿಬೆಳೆಸಬೇಕಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಪಕ್ಷವನ್ನು ಕಟ್ಟಿಬೆಳೆಸಬೇಕಾಗಿದೆ ಎಂದರು.</p>.<p><strong>ಪುಸ್ತಕ ಬಿಡುಗಡೆ:</strong> ದೇವನೂರು ಮಹಾದೇವ ಅವರ 'ಈಗ ಭಾರತ ಮಾತನಾಡುತ್ತಿದೆ...' ಹಾಗೂ ಜೆಡಿಎಸ್ ಹೊರತಂದಿರುವ 'ಉತ್ತರ ಕರ್ನಾಟಕಕ್ಕೆ ದೇವೇಗೌಡರ ಕೊಡುಗೆ' ಎಂಬ ಎರಡು ಪುಸ್ತಕಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಿದರು.</p>.<p>'ನಾನು ರಾಜಕೀಯ ಪ್ರವೇಶಿಸಿ 59 ವರ್ಷವಾಯಿತು. ಅನೇಕ ಏಳುಬೀಳು ಕಂಡಿದ್ದೇನೆ. ಜೆಡಿಎಸ್ ಕೇವಲ ಹಳೇ ಮೈಸೂರಿಗೆ ಸೀಮಿತ, ದೇವೇಗೌಡ ಜಾತಿವಾದಿ, ಉತ್ತರ ಕರ್ನಾಟಕಕ್ಕೆ ಏನೂ ಮಾಡಿಲ್ಲ ಎಂದು ಬಿಂಬಿಸಲಾಗುತ್ತಿದೆ. ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು' ಎಂದರು. ವೈಎಸ್ವಿ ದತ್ತ, ಕೋನರಡ್ಡಿ, ತಿಪ್ಪೇಸ್ವಾಮಿ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>