ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ಲಂಚ ಕೊಟ್ಟ ಯಡಿಯೂರಪ್ಪ: ಕ್ಯಾರವಾನ್

Last Updated 22 ಮಾರ್ಚ್ 2019, 12:22 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಗೃಹ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ಅರುಣ್‌ ಜೇಟ್ಲಿ, ಹಿರಿಯ ನಾಯಕರಾದ ಎಲ್‌.ಕೆ.ಆಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಸೇರಿದಂತೆ ಬಿಜೆಪಿಯ ಹಲವು ಉನ್ನತ ನಾಯಕರಿಗೆ ಸುಮಾರು ₹1800 ಕೋಟಿ ಮೊತ್ತದಷ್ಟು ಹಣ ಪಾವತಿಸಿದ್ದಾರೆ ಎನ್ನುವ ಸ್ಫೋಟಕ ಮಾಹಿತಿಯನ್ನು ‘ದಿ ಕ್ಯಾರವಾನ್’ ನಿಯತಕಾಲಿಕೆ ಶುಕ್ರವಾರ ಪ್ರಕಟಿಸಿದೆ.

‘ದಿ ಯೆಡ್ಡಿ ಡೈರೀಸ್’ ಶೀರ್ಷಿಕೆಯ ತನಿಖಾ ವರದಿಯಲ್ಲಿ ಅರುಣ್‌ ಜೇಟ್ಲಿ ಮತ್ತು ನಿತಿನ್ ಗಡ್ಕರಿ ಅವರಿಗೆ ತಲಾ ₹150 ಕೋಟಿ, ರಾಜನಾಥ್ ಸಿಂಗ್ ಅವರಿಗೆ ₹100 ಕೋಟಿ, ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರಿಗೆ ತಲಾ ₹50 ಕೋಟಿ ಹಣವನ್ನು ಯಡಿಯೂರಪ್ಪ ಪಾವತಿಸಿದ್ದಾರೆ ಎಂದು ಯಡಿಯೂರಪ್ಪ ಅವರೇ ಸ್ವತಃ ಬರೆದಿದ್ದಾರೆ ಎನ್ನಲಾದ ಡೈರಿಯ ಹಾಳೆಗಳನ್ನು ಉಲ್ಲೇಖಿಸಿ ನಿಯತಕಾಲಿಕೆಯು ವರದಿ ಮಾಡಿದೆ.

ಕ್ಯಾರವಾನ್ ಪ್ರಕಟಿಸಿರುವ ಯಡಿಯೂರಪ್ಪ ಅವರು ಬರೆದಿದ್ದಾರೆ ಎನ್ನಲಾದ ಡೈರಿ.
ಕ್ಯಾರವಾನ್ ಪ್ರಕಟಿಸಿರುವ ಯಡಿಯೂರಪ್ಪ ಅವರು ಬರೆದಿದ್ದಾರೆ ಎನ್ನಲಾದ ಡೈರಿ.

ಆದಾಯ ತೆರಿಗೆ ಇಲಾಖೆಯ ಬಳಿ 2017ರಿಂದ ಇರುವ ಈ ಡೈರಿಯಲ್ಲಿ ‘ನಿತಿನ್ ಗಡ್ಕರಿ ಮಗನ ಮದುವೆಗೆ ₹10 ಕೋಟಿ, ನ್ಯಾಯಾಧೀಶರಿಗೆ ₹250 ಕೋಟಿ ಮತ್ತು ವಕೀಲರಿಗೆ (ಶುಲ್ಕ) ₹50 ಕೋಟಿ ಪಾವತಿಸಲಾಗಿದೆ’ ಎನ್ನುವ ಮಾಹಿತಿಯೂ ಇದೆ ಎಂದು ‘ಕ್ಯಾರವಾನ್’ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT