ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಉಳಿದಂತೆ ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರು1 ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಆಡಳಿತಾರೂಢ ಬಿಜೆಪಿ ಹಾಗೂ ಉಪ ಚುನಾವಣಾ ಕಣದಲ್ಲಿರುವ 13 ಅನರ್ಹ ಶಾಸಕರ ಪಾಲಿಗೆ ಈ ದಿನ ನಿರ್ಣಾಯಕವಾಗಿದೆ.
ಈಗಾಗಲೇ 10ರಿಂದ 11ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಷ್ಟು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸುರಕ್ಷಿತವಾಗಿರಲಿದೆ.
ಒಂದು ವೇಳೆಬಿಜೆಪಿ ಕನಿಷ್ಠ 6 ಕ್ಷೇತ್ರಗಳಲ್ಲಿ ಗೆಲ್ಲದೇ ಇದ್ದರೆ ಸರ್ಕಾರಕ್ಕೆ ಆಪತ್ತು ಖಚಿತ ಒಂದು ಹೇಳಲಾಗುತ್ತಿದೆ.