ಬೆಳಿಗ್ಗೆ ಬೆಂಗಳೂರಿನಿಂದ ದೇವದುರ್ಗಕ್ಕೆ ಪ್ರವಾಸಕ್ಕೆ ತೆರಳುವುದಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಈ ವಿಷಯವಾಗಿ ಮಾತನಾಡಿ, ‘ಮಂತ್ರಿ ಮಂಡಲ ವಿಸ್ತರಣೆ ಕುರಿತು ಊಹಾಪೋಹಗಳು ಪ್ರಕಟ ಆಗುತ್ತಿವೆ. ಅವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಂದಿರುವವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನೂರಕ್ಕೆ ನೂರರಷ್ಟು ಸಂಪುಟ ವಿಸ್ತರಣೆ ಆಗಲಿದೆ. ಊಹಾಪೋಹಗಳಿಗೆ ಕಿವಿಗೊಡಬಾರದು’ ಎಂದು ಹೇಳಿದರು.