<p><strong>ಬೆಂಗಳೂರು:</strong> ‘ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಈಶ್ವರನ್ ಕೊಟ್ಟಿರುವ ಉಡುಗೊರೆ ಯಾವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಬೇಕು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆಗ್ರಹಿಸಿದರು.</p>.<p>ಬೆಂಗಳೂರು ಪ್ರೆಸ್ ಕ್ಲಬ್ ಸೋಮವಾರ ಆಯೋಜಿಸಿದ್ದ ‘ಮಾತು–ಮಂಥನ’ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿ, ‘ಅದು ಹುಬ್ಲೊ ವಾಚ್ ಎಂಬ ಅನುಮಾನ ಇದೆ. ಚೆಂಡು ಈಗ ಸಿದ್ದರಾಮಯ್ಯ ಅವರ ಅಂಗಳದಲ್ಲಿ ಇದೆ. ಅವರು ಉತ್ತರ ನೀಡಬೇಕು’ ಎಂದರು.</p>.<p>‘ಕಾಂಗ್ರೆಸ್ನಲ್ಲಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಮಾತ್ರ ಸ್ಟಾರ್ ಪ್ರಚಾರಕರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕೆಲವು ದಿನಗಳಿಂದ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷರ ಸುದ್ದಿಯೇ ಇಲ್ಲ. ಜನರಿಗೆ ಕಾಂಗ್ರೆಸ್ಗಿಂತ ಸಿದ್ದರಾಮಯ್ಯ ಮೇಲೆ ಹೆಚ್ಚು ಸಿಟ್ಟು ಇದೆ’ ಎಂದರು.</p>.<p>‘ಕಳೆದ ಚುನಾವಣೆಯಲ್ಲಿ ಚುನಾವಣಾ ನಿರ್ವಹಣೆ ಹೊಣೆಯನ್ನು ಅರವಿಂದ ಲಿಂಬಾವಳಿ ಹೊತ್ತಿದ್ದರು. ಈ ಸಲ ಕ್ಷೇತ್ರ ಬಿಟ್ಟು ಬರಲು ಆಗುವುದಿಲ್ಲ ಎಂದು ಅವರು ಹೇಳಿದ್ದರು. ಹಾಗಾಗಿ ಆ ಹೊಣೆ ನನಗೆ ಬಂದಿದೆ. ಹೀಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಾನೇ ಹೇಳಿದ್ದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಈಶ್ವರನ್ ಕೊಟ್ಟಿರುವ ಉಡುಗೊರೆ ಯಾವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಬೇಕು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆಗ್ರಹಿಸಿದರು.</p>.<p>ಬೆಂಗಳೂರು ಪ್ರೆಸ್ ಕ್ಲಬ್ ಸೋಮವಾರ ಆಯೋಜಿಸಿದ್ದ ‘ಮಾತು–ಮಂಥನ’ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿ, ‘ಅದು ಹುಬ್ಲೊ ವಾಚ್ ಎಂಬ ಅನುಮಾನ ಇದೆ. ಚೆಂಡು ಈಗ ಸಿದ್ದರಾಮಯ್ಯ ಅವರ ಅಂಗಳದಲ್ಲಿ ಇದೆ. ಅವರು ಉತ್ತರ ನೀಡಬೇಕು’ ಎಂದರು.</p>.<p>‘ಕಾಂಗ್ರೆಸ್ನಲ್ಲಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಮಾತ್ರ ಸ್ಟಾರ್ ಪ್ರಚಾರಕರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕೆಲವು ದಿನಗಳಿಂದ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷರ ಸುದ್ದಿಯೇ ಇಲ್ಲ. ಜನರಿಗೆ ಕಾಂಗ್ರೆಸ್ಗಿಂತ ಸಿದ್ದರಾಮಯ್ಯ ಮೇಲೆ ಹೆಚ್ಚು ಸಿಟ್ಟು ಇದೆ’ ಎಂದರು.</p>.<p>‘ಕಳೆದ ಚುನಾವಣೆಯಲ್ಲಿ ಚುನಾವಣಾ ನಿರ್ವಹಣೆ ಹೊಣೆಯನ್ನು ಅರವಿಂದ ಲಿಂಬಾವಳಿ ಹೊತ್ತಿದ್ದರು. ಈ ಸಲ ಕ್ಷೇತ್ರ ಬಿಟ್ಟು ಬರಲು ಆಗುವುದಿಲ್ಲ ಎಂದು ಅವರು ಹೇಳಿದ್ದರು. ಹಾಗಾಗಿ ಆ ಹೊಣೆ ನನಗೆ ಬಂದಿದೆ. ಹೀಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಾನೇ ಹೇಳಿದ್ದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>