ಸ್ವಚ್ಛ ಭಾರತದ ರಾಯಭಾರಿಯೂ ಆಗಿರುವ ಎಚ್.ಖುಷಿ ಅವರು ಕಳೆದ ಡಿಸೆಂಬರ್ 31ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ, ಯೋಗವನ್ನು ಕ್ರೀಡಾ ವರ್ಗದ ಆದ್ಯ ಗುಂಪಿನಲ್ಲಿ ಸೇರ್ಪಡೆ ಮಾಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಪ್ರಧಾನಿ, ಕ್ರೀಡಾ ವರ್ಗಕ್ಕೆ ಸೇರ್ಪಡೆ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.