ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ‘ಹಿಂದೂ–ಮುಸ್ಲಿಂ–ಸಿಖ್–ಇಸಾಯಿ ಫೆಡರೇಷನ್ ಬೆಂಗಳೂರು’ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಎ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.#CAApic.twitter.com/Zb3YdS37T0
ಪ್ರತಿಭಟನೆ ಸಭೆ ಆರಂಭವಾಗುತ್ತಿದ್ದಂತೆ ವೇದಿಕೆ ಏರಿದ ಅಮೂಲ್ಯ, ಎರಡು ಬಾರಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದರು. ತಕ್ಷಣ ಅಲ್ಲೇ ಇದ್ದ ಪೊಲೀಸರು, ಅಮೂಲ್ಯ ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡರು.
#WATCH Ruckus erupts at the protest rally against CAA&NRC in Bengaluru where AIMIM Chief Asaddudin Owaisi is present. A woman named Amulya at the protest rally says "The difference between Pakistan zinadabad and Hindustan zindabad is...". pic.twitter.com/FPh5Ccu3HD
ಪ್ರತಿಭಟನಾ ಸಭೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಅವರು ತಕ್ಷಣ ಯುವತಿ ಕೈಯಿಂದ ಮೈಕ್ ಎಳೆದುಕೊಂಡು, ‘ಯುವತಿ ಈ ರೀತಿ ಘೋಷಣೆ ಕೂಗಬಾರದಿತ್ತು. ನಾವು ಈ ಘೋಷಣೆಯನ್ನು ಖಂಡಿಸುತ್ತೇವೆ’ ಎಂದರು. ಸಂಘಟಕರು ಕೂಡಾ ಓವೈಸಿ ಮಾತಿಗೆ ದನಿಗೂಡಿಸಿದರು.
‘ನಮ್ಮದು ಹಿಂದೂಸ್ತಾನ. ನಾವೆಲ್ಲರೂ ಹಿಂದೂಸ್ತಾನಿಗಳು. ಆಕೆ ತಪ್ಪಾಗಿ ಘೋಷಣೆ ಕೂಗಿದ್ದಾಳೆ’ ಎಂದೂ ಅವರು ಹೇಳಿದರು. ಅಷ್ಟರಲ್ಲಿ ಅಮೂಲ್ಯ ಅವರನ್ನು ಪೊಲೀಸರು ಸ್ಥಳದಿಂದ ಕರೆದೊಯ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ‘ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ಇಂತಹ ಹೇಳಿಕೆಗಳಿಂದ ಮನಸ್ಸಿಗೆ ನೋವುಂಟಾಗುತ್ತದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಇಂಥವರ ವಿರುದ್ದ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು,’ ಎಂದು ಹೇಳಿದ್ದಾರೆ.