ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಮ್‌ಗಾರ್ಡ್ ನೇಮಕಾತಿ ಪರೀಕ್ಷೆ ವೇಳೆ ಹೃದಯಾಘಾತ: ಯುವಕ ಸಾವು

Last Updated 21 ಮೇ 2019, 7:02 IST
ಅಕ್ಷರ ಗಾತ್ರ

ಬೆಳಗಾವಿ‌: ಇಲ್ಲಿನ ಹೊರವಲಯದ ಮಚ್ಚೆಯಲ್ಲಿರುವ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆಯುತ್ತಿದ್ದ ಹೋಮ್‌ಗಾರ್ಡ್ ನೇಮಕಾತಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರನ್ನು ಖಾಸಬಾಗದ ಗಾಯತ್ರಿನಗರದ ನಿವಾಸಿ ಬೆಳಗಾವಿಗೆ ಪ್ರಸಾದ ಅರ್ಜುನ ತಾಳೂಕರ (25) ಎಂದು ಗುರುತಿಸಲಾಗಿದೆ. ಅವರಿಗೆ ತಂದೆ, ತಾಯಿ, ಸಹೋದರ ಹಾಗೂ ನಾಲ್ವರು ಸಹೋದರಿಯರು ಇದ್ದಾರೆ.

ಹೋಮ್‌ಗಾರ್ಡ್ ಆಗಿ ನೇಮಕಗೊಳ್ಳುವ ಆಕಾಂಕ್ಷೆ ಹೊತ್ತು ಬಂದಿದ್ದ ಅವರು, ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಎರಡು ಸುತ್ತು ಓಟ ಮುಗಿಸಿ ಮೂರನೇ ಸುತ್ತು ಓಡುತ್ತಿರುವಾಗ ಕುಸಿದು ಬಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಆಸ್ಪತ್ರೆ ಬಳಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.

ಹೋಮ್‌ಗಾರ್ಡ್ ಡಿಐಜಿಪಿ ಡಿ.ಸಿ. ರಾಜಪ್ಪ, ಎಸಿಪಿ ಎನ್.ವಿ. ಬರಮನಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT